ಡಿ ಕೆ ಶಿವಕುಮಾರ್ 
ರಾಜ್ಯ

ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ

ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ -  ಜೆಡಿಎಸ್ ನವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನು ಸ್ವೀಕಾರ ಮಾಡಿದ ಕೇಂದ್ರ ಸರ್ಕಾರದ ಅಧ್ಯಯನಕ್ಕೆ ಅಧಿಕಾರಿಗಳನ್ನ ಕಳಿಸಿದರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರಿನ, ಮೇವು, ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ ಎಂದರು. 

ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ಹಣ ಕೊಡಲಿಲ್ಲ ಎಂದರೂ, ನಮ್ಮ ಸರ್ಕಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಕೇಂದ್ರ ಸರ್ಕಾರ ನಮ್ಮಿಂದ ಬರ ಪರಿಹಾರ ಕೊಡಲು ಆಗಲ್ಲ ಎಂದು ಹೇಳಬೇಕು ಎಂದು ಸವಾಲು ಹಾಕಿದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT