ಡಿ ಕೆ ಶಿವಕುಮಾರ್ 
ರಾಜ್ಯ

ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ

ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ -  ಜೆಡಿಎಸ್ ನವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನು ಸ್ವೀಕಾರ ಮಾಡಿದ ಕೇಂದ್ರ ಸರ್ಕಾರದ ಅಧ್ಯಯನಕ್ಕೆ ಅಧಿಕಾರಿಗಳನ್ನ ಕಳಿಸಿದರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರಿನ, ಮೇವು, ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ ಎಂದರು. 

ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ಹಣ ಕೊಡಲಿಲ್ಲ ಎಂದರೂ, ನಮ್ಮ ಸರ್ಕಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಕೇಂದ್ರ ಸರ್ಕಾರ ನಮ್ಮಿಂದ ಬರ ಪರಿಹಾರ ಕೊಡಲು ಆಗಲ್ಲ ಎಂದು ಹೇಳಬೇಕು ಎಂದು ಸವಾಲು ಹಾಕಿದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT