ಜಿಲ್ಲಾಧಿಕಾರಿ ಸತ್ಯಭಾಮ 
ರಾಜ್ಯ

ಹಾಸನಾಂಬ ದೇವಸ್ಥಾನದಲ್ಲಿ ವಿವಿಐಪಿಗಳ ನಿರ್ವಹಣೆ ವೇಳೆ ತಾಳ್ಮೆ ಕಳೆದುಕೊಂಡು ಎಸಿಗೆ ಹೊಡೆದ ಡಿಸಿ!

ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಾಳ್ಮೆ ಕಳೆದುಕೊಂಡು ಸಕಲೇಶಪುರ ಉಪವಿಭಾಗದ ಸಹಾಯಕ ಆಯುಕ್ತೆ ಶೃತಿ ಎಂಬುವರಿಗೆ ಹೊಡೆದಿದ್ದಾರೆ ಎನ್ನಲಾಗಿದೆ. 

ಹಾಸನ: ಹಾಸನಾಂಬೆ ದೇಗುಲದ ವಿವಿಐಪಿ ಗೇಟ್ ತಳ್ಳಿ ಜನರು ನುಗ್ಗಿದ್ದ ಹಿನ್ನೆಲೆ ಆಕ್ರೋಶಗೊಂಡ ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಾಳ್ಮೆ ಕಳೆದುಕೊಂಡು ಸಕಲೇಶಪುರ ಉಪವಿಭಾಗದ ಸಹಾಯಕ ಆಯುಕ್ತೆ ಶೃತಿ ಎಂಬುವರಿಗೆ ಹೊಡೆದಿದ್ದಾರೆ ಎನ್ನಲಾಗಿದೆ. 

ದೇವಿಯ ದರ್ಶನಕ್ಕೆ ಭಾರಿ ಜನಸ್ತೋಮ ಸೇರಿತ್ತು. ಶಾಸಕ ಸಿಮೆಂಟ್ ಮಂಜು ಅವರು ವಿವಿಐಪಿ ಗೇಟ್ ಮೂಲಕ ದೇಗುಲದ ಒಳಗೆ ಪ್ರವೇಶಿಸುತ್ತಿದ್ದಂತೆ ಶಾಸಕರ ಜೊತೆ ಗೇಟ್ ತಳ್ಳಿ ಜನರು ಒಳಗೆ ನುಗ್ಗಿದ್ದಾರೆ. ಈ ವೇಳೆ ಗರಂ ಆದ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಕೈಗೆ ಹೊಡೆದು ಸುಮ್ಮನಿರುವಂತೆ ಗದರಿಸಿ ಹೇಳಿದರು.

ಬೆಳಗ್ಗೆಯಿಂದಲೇ ಜನಸಂದಣಿ ನಿಯಂತ್ರಿಸಲು ಜಿಲ್ಲಾಧಿಕಾರಿ, ಎಸ್ಪಿ ಹರಸಾಹಸ ಪಟ್ಟಿದ್ದರು. ಡಿಸಿ ಕೂಡ ವಿವಿಐಪಿ ಗೇಟ್ ಮುಂದೆ ಕುಳಿತು ರಾತ್ರಿಯವರೆಗೂ ಜನಸಂದಣಿಯನ್ನು ಖುದ್ದಾಗಿ ನಿಯಂತ್ರಿಸಿದ್ದರು.

ಇದಕ್ಕೂ ಮುನ್ನ ಡಿಸಿ ಕೂಡ ಹಲವು ಬಾರಿ ಕೈ ಜೋಡಿಸಿ ಭಕ್ತರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT