ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ 
ರಾಜ್ಯ

ಜಯನಗರ ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ನಿರ್ಧಾರಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಬೆಂಬಲ

ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಿದ್ದ ಬಿಬಿಎಂಪಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಿದ್ದ ಬಿಬಿಎಂಪಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.

ಬಿಬಿಎಂಪಿ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಬೀದಿ ವ್ಯಾಪಾರಿಗಳು ಪಾದಚಾರಿ ಮಾರ್ಗಗಳಲ್ಲಿ ತಮ್ಮ ಜೀವನೋಪಾಯವನ್ನು ನಡೆಸಬಹುದು. ಆದರೆ, ಬಿಬಿಎಂಪಿ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದ ಅಂಗಡಿಗಳನ್ನಷ್ಟೇ ತೆರವುಗೊಳಿಸಿದ್ದಾರೆಂದು ಹೇಳಿದರು.

ಜಯನಗರ 4ನೇ ಬ್ಲಾಕ್‌ನಲ್ಲಿ ಬೀದಿಬದಿ ವ್ಯಾಪಾರಿಗಳು ರಸ್ತೆಗಳನ್ನು ಯಾವ ರೀತಿಯಲ್ಲಿ ಆಕ್ರಮಿಸಿಕೊಂಡಿದ್ದಾರೆಂಬುದ ವಿಡಿಯೋವನ್ನು ಬಿಬಿಎಂಪಿ ಆಯುಕ್ತರು ನನಗೆ ತೋರಿಸಿದ್ದಾರೆ. ಹೀಗಾಗಿಯೇ ಅಂಗಡಿಗಳ ತೆರವಿಗೆ ಒಪ್ಪಿಗೆ ನೀಡಲಾಗಿತ್ತು. ಪರಿಹಾರ ಕಂಡುಕೊಳ್ಳಲು ಬೀದಿ ಬದಿ ವ್ಯಾಪಾರಿಗಳೊಂದಿಗೆ ಸರ್ಕಾರ ಸಭೆ ಕರೆಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT