ಆರ್ ಡಿ ಪಾಟೀಲ್ 
ರಾಜ್ಯ

KEA Exam Scam: ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳಾದ ಆರ್ ಡಿ ಪಾಟೀಲ್, ಸಂತೋಷ್ ಹಾಗೂ ಸಲೀಂನನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ಮನವಿ ಮಾಡಿದ್ದರು. ಆದರೆ 2ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಮೂರ್ತಿ ಸ್ಮಿತಾ ಅವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಶೋಕನಗರ ಠಾಣೆ ಪೊಲೀಸರು ಹಗರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಸ್ಥಳ ಮಹಜರು ನಡೆಸಿದ್ದರು. ಆ ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. 

KEA ಬ್ಲೂಟೂತ್ ಹಗರಣ: CID ತನಿಖೆಗೆ ಆದೇಶಿಸಿದ ಸರ್ಕಾರ
2023ರ ಅಕ್ಟೋಬರ್ 28ರಂದು ಕಲಬುರಗಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಗಳನ್ನು ಬರೆಯಲು ಬ್ಲೂಟೂತ್ ಸಾಧನಗಳನ್ನು ಬಳಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಐಪಿಸಿ 109, 114, 120 ಬಿ ಹಾಗೂ ಇತರೆ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಬ್ಲೂಟೂತ್ ಹಗರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ಆದೇಶಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ