ಕೊಡಗಿನಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರು ಆರೋಪಿಗಳ ಬಂಧನ 
ರಾಜ್ಯ

ಕೊಡಗು: ಜಿಂಕೆ ಬೇಟೆಯಾಡಿದ ಇಬ್ಬರ ಬಂಧನ, ಮೂವರು ಆರೋಪಿಗಳು ನಾಪತ್ತೆ

ಜಿಂಕೆಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ತಲೆಮರೆಸಿಕೊಂಡಿದ್ದಾರೆ. ಪೊನ್ನಂಪೇಟೆ ಅರಣ್ಯ ವಲಯದ ಅಧಿಕಾರಿಗಳು ಹಾಗೂ ನಾಗರಹೊಳೆಯ ಕಲ್ಲಲ್ಲ ವನ್ಯಜೀವಿ ವಲಯದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಮಡಿಕೇರಿ: ಜಿಂಕೆಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ತಲೆಮರೆಸಿಕೊಂಡಿದ್ದಾರೆ. ಪೊನ್ನಂಪೇಟೆ ಅರಣ್ಯ ವಲಯದ ಅಧಿಕಾರಿಗಳು ಹಾಗೂ ನಾಗರಹೊಳೆಯ ಕಲ್ಲಲ್ಲ ವನ್ಯಜೀವಿ ವಲಯದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಪೊನ್ನಂಪೇಟೆಯ ನಿಟ್ಟೂರು ಗ್ರಾಮದ ಬಿಸಿ ಜೀವನ್ ಮತ್ತು ವಿಜಿ ಲಿಂಗರಾಜ್ ಬಂಧಿತ ಆರೋಪಿಗಳು. ಅದೇ ಗ್ರಾಮದ ಶರತ್, ಚೇತನ್, ಸ್ವಾಮಿ ಸೇರಿದಂತೆ ಮೂವರು ಆರೋಪಿಗಳು ನಾಪತ್ತೆಯಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ಮೂಲಗಳ ಪ್ರಕಾರ, ಆರೋಪಿ ಶರತ್ ಇತರರೊಂದಿಗೆ ನಾಗರಹೊಳೆ ಮಿತಿಯಲ್ಲಿರುವ ಕಲ್ಲಲ್ಲ ವನ್ಯಜೀವಿ ಅರಣ್ಯಕ್ಕೆ ತಮ್ಮ ಪರವಾನಗಿ ಪಡೆದ ಬಂದೂಕುಗಳೊಂದಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಅವರು ಚುಕ್ಕೆ ಜಿಂಕೆಯನ್ನು ಬೇಟೆಯಾಡಿ, ಕೊಂದು ಅರಣ್ಯ ವಲಯದಿಂದ ಹೊರಗೆ ಕೊಂಡೊಯ್ದಿದ್ದಾರೆ. ನಂತರ ಜಿಂಕೆ ಮಾಂಸವನ್ನು ಹಂಚಿಕೊಂಡಿದ್ದಾರೆ. ಜಿಂಕೆಯ ಕೊಂಬುಗಳನ್ನು ಆರೋಪಿಗಳಲ್ಲಿ ಒಬ್ಬಾತ ತೆಗೆದುಕೊಂಡಿದ್ದಾನೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊನ್ನಂಪೇಟೆ ಹಾಗೂ ಕಲ್ಲಾಳ ವನ್ಯಜೀವಿ ಅರಣ್ಯಾಧಿಕಾರಿಗಳು ಮಾಂಸ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ದಾಳಿ ನಡೆಸಿ ಜೀವನ್ ಮತ್ತು ಲಿಂಗರಾಜ್ ಎಂಬುವರನ್ನು ಬಂಧಿಸಿದ್ದಾರೆ. ಉಳಿದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಜಿಂಕೆ ಮಾಂಸ, ಕೊಂಬು ಹಾಗೂ  ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತಲೆಮರೆಸಿಕೊಂಡಿರುವವರ ಪತ್ತೆಗೆ ತನಿಖೆ ಮುಂದುವರಿದಿದೆ.

ಪೊನ್ನಂಪೇಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಶಾಂತೇಶ್ ಅವರು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT