ಸಾಂದರ್ಭಿಕ ಚಿತ್ರ 
ರಾಜ್ಯ

ದೀಪಾವಳಿ ಪಟಾಕಿ ಅವಘಡ: ಬೆಂಗಳೂರಿನಾದ್ಯಂತ 20 ಮಂದಿಗೆ ಸುಟ್ಟಗಾಯ, ಅವರಲ್ಲಿ ನೋಡುಗರೇ ಹೆಚ್ಚು!

ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು: ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ಪಟಾಕಿ ಸಿಡಿತದಿಂದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ ಎಂದು ನಾರಾಯಣ ಹೆಲ್ತ್‌ನ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ಹೇಳಿದ್ದಾರೆ. ಗಾಯಾಳುಗಳ ಪೈಕಿ ಶೇ. 90 ರಷ್ಟು ಮಂದಿ ನೋಡುಗರು ಅಥವಾ ಕೆಲಸದಿಂದ ಮನೆಗೆ ಮರಳುತ್ತಿದ್ದ ಅಮಾಯಕ ನಾಗರಿಕರಾಗಿದ್ದಾರೆ. ಇದು ಆತಂಕಕ್ಕೆ ದೊಡ್ಡ ಕಾರಣ ಅಂದು ಅವರು ತಿಳಿಸಿದ್ದಾರೆ. 

ನಾರಾಯಣ ಆಸ್ಪತ್ರೆಯಲ್ಲಿನ ಆರು ಪ್ರಕರಣಗಳಲ್ಲಿ ಮೂರು ಪ್ರಕರಣಗಳು 19 ಮತ್ತು 22 ರ ನಡುವಿನ ವಯಸ್ಸಿನವರಾಗಿದ್ದರೆ, ಒಬ್ಬರು 50 ವರ್ಷದ ವ್ಯಕ್ತಿಯಾಗಿದ್ದಾರೆ.ರೋಗಿಗಳಿಗೆ ಇಂಟ್ರಾಕ್ಯುಲರ್ ರಕ್ತಸ್ರಾವವಾಗಿರುವುದರಿಂದ ಮತ್ತು ಅವರ ಕಣ್ಣುಗಳಲ್ಲಿ ಕಣಗಳು ಇದ್ದುದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ, ಅವುಗಳನ್ನು ತೆಗೆದು ಸ್ವಚ್ಛಗೊಳಿಸಲಾಗಿದೆ. ಎಲ್ಲಾ ರೋಗಿಗಳನ್ನು ಮುಂದಿನ 48 ಗಂಟೆಗಳ ಕಾಲ ನಿಗಾವಣೆ ಮಾಡಲಾಗುತ್ತಿದ್ದು, ಅವರಿಗೆ ಯಾವುದೇ ಶಾಶ್ವತ ಹಾನಿಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು  ಡಾ.ರೋಹಿತ್ ತಿಳಿಸಿದ್ದಾರೆ. 

ಶಂಕರ ನೇತ್ರಾಲಯದಲ್ಲಿ  ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಹುಡುಗ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT