ಸಾಂದರ್ಭಿಕ ಚಿತ್ರ 
ರಾಜ್ಯ

ದೀಪಾವಳಿ ಪಟಾಕಿ ಅವಘಡ: ಬೆಂಗಳೂರಿನಾದ್ಯಂತ 20 ಮಂದಿಗೆ ಸುಟ್ಟಗಾಯ, ಅವರಲ್ಲಿ ನೋಡುಗರೇ ಹೆಚ್ಚು!

ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು: ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ಪಟಾಕಿ ಸಿಡಿತದಿಂದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ ಎಂದು ನಾರಾಯಣ ಹೆಲ್ತ್‌ನ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ಹೇಳಿದ್ದಾರೆ. ಗಾಯಾಳುಗಳ ಪೈಕಿ ಶೇ. 90 ರಷ್ಟು ಮಂದಿ ನೋಡುಗರು ಅಥವಾ ಕೆಲಸದಿಂದ ಮನೆಗೆ ಮರಳುತ್ತಿದ್ದ ಅಮಾಯಕ ನಾಗರಿಕರಾಗಿದ್ದಾರೆ. ಇದು ಆತಂಕಕ್ಕೆ ದೊಡ್ಡ ಕಾರಣ ಅಂದು ಅವರು ತಿಳಿಸಿದ್ದಾರೆ. 

ನಾರಾಯಣ ಆಸ್ಪತ್ರೆಯಲ್ಲಿನ ಆರು ಪ್ರಕರಣಗಳಲ್ಲಿ ಮೂರು ಪ್ರಕರಣಗಳು 19 ಮತ್ತು 22 ರ ನಡುವಿನ ವಯಸ್ಸಿನವರಾಗಿದ್ದರೆ, ಒಬ್ಬರು 50 ವರ್ಷದ ವ್ಯಕ್ತಿಯಾಗಿದ್ದಾರೆ.ರೋಗಿಗಳಿಗೆ ಇಂಟ್ರಾಕ್ಯುಲರ್ ರಕ್ತಸ್ರಾವವಾಗಿರುವುದರಿಂದ ಮತ್ತು ಅವರ ಕಣ್ಣುಗಳಲ್ಲಿ ಕಣಗಳು ಇದ್ದುದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ, ಅವುಗಳನ್ನು ತೆಗೆದು ಸ್ವಚ್ಛಗೊಳಿಸಲಾಗಿದೆ. ಎಲ್ಲಾ ರೋಗಿಗಳನ್ನು ಮುಂದಿನ 48 ಗಂಟೆಗಳ ಕಾಲ ನಿಗಾವಣೆ ಮಾಡಲಾಗುತ್ತಿದ್ದು, ಅವರಿಗೆ ಯಾವುದೇ ಶಾಶ್ವತ ಹಾನಿಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು  ಡಾ.ರೋಹಿತ್ ತಿಳಿಸಿದ್ದಾರೆ. 

ಶಂಕರ ನೇತ್ರಾಲಯದಲ್ಲಿ  ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಹುಡುಗ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT