ರಾಜ್ಯ

ಮೈಸೂರು: ಪೊಲೀಸರ ಕಿರುಕುಳದಿಂದ ನೊಂದು ಬೆಂಕಿ ಹಚ್ಚಿಕೊಂಡು ಯುವಕ ಸಾವಿಗೆ ಶರಣು

Ramyashree GN

ಮೈಸೂರು: ಪೊಲೀಸರಿಂದ ಕಿರುಕುಳ ಆರೋಪದ ಮೇಲೆ ಬೆಂಕಿ ಹಚ್ಚಿಕೊಂಡ ಯುವಕ ಮಂಗಳವಾರ ಇಲ್ಲಿ ಸಾವಿಗೀಡಾಗಿದ್ದಾನೆ.
ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ನಿವಾಸಿ ಇಪ್ಪತ್ಮೂರು ವರ್ಷದ ಕಿರಣ್ ಕುಮಾರ್ ಎಂಬಾತ ಪೊಲೀಸರ ಕಿರುಕುಳದಿಂದ ಬೇಸತ್ತು ತನ್ನ ನಿವಾಸದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಸ್ಟಡಿಯಲ್ಲಿರುವಾಗ ಪೊಲೀಸರು ನೀಡಿದ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂತ್ರಸ್ತ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.

ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಗರ್ಲೆ ಗ್ರಾಮದಲ್ಲಿ ನಡೆದ ಹಿಂಸಾಚಾರದ ಘಟನೆಗೆ ಸಂಬಂಧಿಸಿದಂತೆ ಬಿಳಿಗೆರೆ ಪೊಲೀಸರು ಸಂತ್ರಸ್ತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಈ ವೇಳೆ ಚಿತ್ರಹಿಂಸೆ ನೀಡಿದ್ದರು ಎನ್ನುವ ಆರೋಪ ಕೇಳಿಬಂದಿದೆ.

ಬಂಧನದಿಂದ ತಪ್ಪಿಸಿಕೊಂಡು ಮನೆಗೆ ಮರಳಿದ ಯುವಕ, ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

SCROLL FOR NEXT