ಸಾಂದರ್ಭಿಕ ಚಿತ್ರ 
ರಾಜ್ಯ

ಶಕ್ತಿ ಯೋಜನೆ ಸೌಲಭ್ಯ: ಮಹಿಳೆಯರು ಮೊಬೈಲ್  ಡಿಜಿಲಾಕರ್ ನಲ್ಲಿ ಐಡಿ ಪ್ರೂಫ್ ತೋರಿಸಿ ಪ್ರಯಾಣಿಸಲು ಅವಕಾಶ

ಇನ್ನು ಮುಂದೆ ಮಹಿಳಾ ಪ್ರಯಾಣಿಕರು ಡಿಜಿಲಾಕರ್ ಆ್ಯಪ್ ಮೂಲಕ ತಮ್ಮ ಫೋನ್‌ನಲ್ಲಿ ಸ್ಥಳೀಯ ನಿವಾಸದ ಪುರಾವೆಗಳನ್ನು ತೋರಿಸಿ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಇನ್ನು ಮುಂದೆ ಅವರ ಐಡಿಗಳ (ಮೂಲ ಅಥವಾ ಫೋಟೊಕಾಪಿ) ಮೂಲ ಪ್ರತಿಯನ್ನು ಒಯ್ಯುವ ಅಗತ್ಯವಿರುವುದಿಲ್ಲ.

ಬೆಂಗಳೂರು: ಇನ್ನು ಮುಂದೆ ಮಹಿಳಾ ಪ್ರಯಾಣಿಕರು ಡಿಜಿಲಾಕರ್ ಆ್ಯಪ್ ಮೂಲಕ ತಮ್ಮ ಫೋನ್‌ನಲ್ಲಿ ಸ್ಥಳೀಯ ನಿವಾಸದ ಪುರಾವೆಗಳನ್ನು ತೋರಿಸಿ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಇನ್ನು ಮುಂದೆ ಅವರ ಐಡಿಗಳ (ಮೂಲ ಅಥವಾ ಫೋಟೊಕಾಪಿ) ಮೂಲ ಪ್ರತಿಯನ್ನು ಒಯ್ಯುವ ಅಗತ್ಯವಿರುವುದಿಲ್ಲ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಾದ್ಯಂತ ಮಹಿಳಾ ಪ್ರಯಾಣಿಕರು ಪದೇ ಪದೇ ಅಧಿಕಾರಿಗಳಿಗೆ ದೂರು ನೀಡಿದ್ದು, ಮೂಲ ಆಧಾರ್ ಕಾರ್ಡು ತರದಿದ್ದರೆ ಟಿಕೆಟ್ ಖರೀದಿಸುವಂತೆ ಕಂಡಕ್ಟರ್‌ಗಳು ಒತ್ತಾಯಿಸುತ್ತಾರೆ ಎಂದು ಹೇಳುತ್ತಿದ್ದರು. 

"ಮಹಿಳಾ ಪ್ರಯಾಣಿಕರು ಡಿಜಿಲಾಕರ್ ಅಪ್ಲಿಕೇಶನ್ ಮೂಲಕ ತಮ್ಮ ಐಡಿಗಳನ್ನು ತೋರಿಸಲು ಅವಕಾಶವಿದ್ದರೂ, ಅನೇಕ ಕಂಡಕ್ಟರ್‌ಗಳು ಅದನ್ನು ತಿರಸ್ಕರಿಸುತ್ತಿದ್ದರು. ಹಾರ್ಡ್ ಕಾಪಿಗಳನ್ನು ಒತ್ತಾಯಿಸುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಪ್ರಯಾಣಿಕರಾದ ಧನಲಕ್ಷ್ಮಿ ಹೇಳಿದರು.

ನವೆಂಬರ್ 3 ರಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರ ಪತ್ರವನ್ನು ಉಲ್ಲೇಖಿಸಿ, ಕೆಕೆಆರ್‌ಟಿಸಿ, “ಕಂಡಕ್ಟರ್‌ಗಳು ಗುರುತಿನ ಪುರಾವೆಗಳನ್ನು ಹಾರ್ಡ್ ಕಾಪಿಗಳ ಮೂಲಕ (ಒರಿಜಿನಲ್ ಅಥವಾ ಫೋಟೊಕಾಪಿ) ಮತ್ತು ಡಿಜಿಲಾಕರ್ ಮೂಲಕ ಸ್ವೀಕರಿಸಬಹುದು ಎಂಬ ಆದೇಶದ ಹೊರತಾಗಿಯೂ, ಕೆಲವು ಬಸ್ ಕಂಡಕ್ಟರ್‌ಗಳು ನಮಗೆ ದೂರುಗಳನ್ನು ಸ್ವೀಕರಿಸುತ್ತಿದ್ದೇವೆ. ಡಿಜಿಲಾಕರ್ ಮೂಲಕ ತೋರಿಸಿರುವ ಪುರಾವೆಗಳನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಮಹಿಳಾ ಪ್ರಯಾಣಿಕರಿಗೆ ಅನಗತ್ಯ ತೊಂದರೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದೆ.

ಕಂಡಕ್ಟರ್‌ಗಳು ಡಿಜಿಲಾಕರ್ ಮೂಲಕ ಐಡಿ ಪುರಾವೆಗಳನ್ನು ಸ್ವೀಕರಿಸಬೇಕು ಮತ್ತು ಮಹಿಳಾ ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!