ಹೆಚ್.ಡಿ ಕುಮಾರಸ್ವಾಮಿ 
ರಾಜ್ಯ

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!

ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು: ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಅವರ ವಿರುದ್ಧ ಜಯನಗರ ಜಾಗೃತದಳದ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಂಗಳವಾರ (ನ.14) ರಂದು ಅಪರಾಧ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಇಇ ಪ್ರಶಾಂತ್‌ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಎಚ್.ಡಿ ಕುಮಾರಸ್ವಾಮಿಯವರು ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕುರಿತು ವಿಡಿಯೋ, ಫೋಟೋ ಸಮೇತ ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಇದಕ್ಕೂ ಮೊದಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ್ ಅವರು, ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆಯಲಾಗಿತ್ತು. ಅದನ್ನು ಪರಿಶೀಲನೆ ಮಾಡಲಾಗಿದೆ. ಸ್ಥಳದಲ್ಲಿ ಏನಿದೆ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ. ಹೆಚ್ಚುವರಿ ತನಿಖೆ ಸಹ ನಾವು ಮಾಡಬೇಕಿದೆ. ಇದು ದಂಡ ವಿಧಿಸಬಹುದಾದ ಶಿಕ್ಷೆ ಮಾತ್ರ. ನಮ್ಮ ಮೇಲಧಿಕಾರಿಗಳಿಗೆ ಎಲ್ಲ ಮಾಹಿತಿಯನ್ನು ನೀಡುತ್ತೇವೆ. ಲೈಟಿಂಗ್ಸ್‌ಗೆ ನೇರವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ನೀಡಲಾಗಿದೆ. ಕುಮಾರಸ್ವಾಮಿ ಅವರು ತಪ್ಪು ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ನಾವು ಈಗ ಪರಿಶೀಲನೆ ಮಾಡುವ ವೇಳೆ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!