ದರ್ಶನ್ ತೂಗುದೀಪ 
ರಾಜ್ಯ

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ನಟ ದರ್ಶನ್

ನೆರೆಮನೆಯ ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಬುಧವಾರ ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನೆರೆಮನೆಯ ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಬುಧವಾರ ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟನ ನಿವಾಸದ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ತನ್ನ ಕಾರನ್ನು ನಿಲ್ಲಿಸಿದ್ದಕ್ಕಾಗಿ ತನ್ನ ಮೇಲೆ ದಾಳಿ ಮಾಡಲು ನಾಯಿಗಳನ್ನು ಬಿಡಲಾಗಿದೆ ಎಂದು ಲಾ ಅಭ್ಯಾಸ ಮಾಡುತ್ತಿರುವ ದೂರುದಾರ ಮಹಿಳೆ ಅಮಿತಾ ಜಿಂದಾಲ್ ಆರೋಪಿಸಿದ್ದಾರೆ.

ಆಕೆಯ ಪ್ರಕಾರ, ದರ್ಶನ್ ಅವರ ನಿವಾಸದ ಉಸ್ತುವಾರಿಗಳು ಪಾರ್ಕಿಂಗ್ ಅನ್ನು ವಿರೋಧಿಸಿದರು ಮತ್ತು ಮನೆಯಲ್ಲಿ ಮೂರು ನಾಯಿಗಳು ಇರುವುದು ನನ್ನ ಗಮನಕ್ಕೆ ಬಂತು. ಈ ವೇಳೆ ಅವುಗಳಲ್ಲಿ ಒಂದನ್ನು ನನ್ನ ಮೇಲೆ ಬಿಡಲಾಯಿತು ಎಂದಿದ್ದಾರೆ.

ಸಿಬ್ಬಂದಿ ಮತ್ತು ದೂರುದಾರರ ನಡುವೆ ವಾಗ್ವಾದ ನಡೆದ ತಕ್ಷಣವೇ ಎರಡು ನಾಯಿಗಳು ಮಹಿಳೆ ಮೇಲೆ ದಾಳಿ ನಡೆಸಿದ್ದು, ಕಚ್ಚಿವೆ ಎಂದು ಆರೋಪಿಸಲಾಗಿದೆ.

ಪೊಲೀಸರು ದರ್ಶನ್ ಅವರನ್ನು ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಯ ಜೊತೆಗೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸೂಚಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

SCROLL FOR NEXT