ಪೋಸ್ಟರ್ ತೆಗೆಯುತ್ತಿರುವ ಪೊಲೀಸರು. 
ರಾಜ್ಯ

ಬೆಂಗಳೂರು: ಜೆಡಿಎಸ್‌ ಕಚೇರಿ ಗೋಡೆ ಮೇಲೆ 'ವಿದ್ಯುತ್‌ ಕಳ್ಳ ಕುಮಾರಸ್ವಾಮಿ' ಪೋಸ್ಟರ್‌!

ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ.

ಬೆಂಗಳೂರು: ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ.

ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ ಮೇಲೆ ಬೆಸ್ಕಾಂ ಜಾಗೃತ ದಳ ಪ್ರಕರಣದ ದಾಖಲಿಸಿಕೊಂಡಿತ್ತು. ಹೀಗಾಗಿ ಎಚ್‌ಡಿಕೆ ಅವರನ್ನು ವ್ಯಂಗ್ಯವಾಡಲು ಕಿಡಿಗೇಡಿಗಳು ಪೋಸ್ಟರ್‌ ಅಂಟಿಸಿದ್ದಾರೆ.

ಕುಮಾರಸ್ವಾಮಿ ಕರೆಂಟ್‌ 200 ಯುನಿಟ್‌ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್‌ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.

ಈ ನಡುವೆ ಪೋಸ್ಟರ್ ಕುರಿತು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪೋಸ್ಟರ್ ತೆಗೆಯುವ ಕೆಲಸ ಮಾಡಿದರು.

ಕುಮಾರಸ್ವಾಮಿ ವಿರುದ್ಧ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

ಕುಮಾರಸ್ವಾಮಿ ಅವರ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಬಳಸಿದ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಈ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ತಮ್ಮ ಅರಿವಿಗೆ ಬಾರದೆ ಪ್ರಮಾದವಾಗಿದೆ. ಬೆಸ್ಕಾಂ ಅಧಿಕಾರಿಗಳ ತನಿಖೆಗೆ ಸಹಕರಿಸುವೆ. ದಂಡ ಪಾವತಿಸುವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT