ಹತ್ಯೆಗೀಡಾದ ಒಂದೇ ಕುಟುಂಬದ ಸದಸ್ಯರು - ಉಡುಪಿ ಎಸ್‌ಪಿ ಕೆ ಅರುಣ್ 
ರಾಜ್ಯ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್‌ಪಿ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.

ಮಂಗಳೂರು: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.

ಶಂಕಿತ ಆರೋಪಿ ಪ್ರವೀಣ್ ಚೌಗಲೆ ಎಂಬಾತನನ್ನು ತಾಂತ್ರಿಕ ಸಾಕ್ಷ್ಯ ಮತ್ತು ಗುಪ್ತಚರ ವರದಿಗಳ ಆಧಾರದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಹಲವಾರು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಕರಣವನ್ನು ಹಲವು ದೃಷ್ಟಿಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಶಂಕಿತರೆಲ್ಲರನ್ನೂ ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಚೌಗಲೆ ಅವರನ್ನು ಈ ಹಿಂದೆ ಉಡುಪಿ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿ ಉಡುಪಿಗೆ ಕರೆತಂದಿದ್ದರು.

ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT