ಜೆಡಿಎಸ್ ಕಚೇರಿ ಮೇಲೆ ಪೋಸ್ಟರ್ ಅಂಟಿಸಿರುವುದು. 
ರಾಜ್ಯ

ವಿದ್ಯುತ್‌ ಕಳ್ಳ ಎಚ್‌ಡಿಕೆ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ನೀಡಿದ ದೂರಿನ ಮೇರೆಗೆ ಬಿಂದು, ನವೀನ್‌ಗೌಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ನವೆಂಬರ್‌ 14ರಂದು ರಾತ್ರಿ 10 ಗಂಟೆ ಸುಮಾರಿಗೆ ಆಟೊದಲ್ಲಿ ಬಂದ ನಾಲ್ವರು ಜೆಡಿಎಸ್‌ ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರಶ್ನಿಸಲು ಮುಂದಾದ ಭದ್ರತಾ ಸಿಬ್ಬಂದಿ ಮಹಾದೇವ್‌ ರುವಾನಿ ಅವರನ್ನು ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ಧಾರೆ. ರುವಾನಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ನವೀನ್‌ಗೌಡ ಹಾಗೂ ಬಿಂದು ಸಾಮಾಜಿಕ ಜಾಲತಾಣದಲ್ಲೂ ಕೀಳು ರೀತಿಯಲ್ಲಿ ಪೋಸ್ಟ್‌ ಹರಿಯಬಿಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಮಂಗಳವಾರ ರಾತ್ರಿಯೇ ಪೋಸ್ಟರ್‌ ತೆರವುಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT