ಚಾಮುಂಡೇಶ್ವರಿ ದೇವಿ 
ರಾಜ್ಯ

ಗೃಹಲಕ್ಷ್ಮೀ ಯೋಜನೆ ಚಾಮುಂಡೇಶ್ವರಿಗೆ ಅರ್ಪಿಸಿದ ಸರ್ಕಾರ; ನಾಡ ದೇವತೆಗೆ ಪ್ರತಿ ತಿಂಗಳು 2 ಸಾವಿರ ರೂ.!

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ...

ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮಹತ್ವದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ.

ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ಅದಕ್ಕೆ ಅಸ್ತು ಎಂದಿದೆ.

ದಿನೇಶ್ ಗೂಳಿಗೌಡ ಪತ್ರಕ್ಕೆ ಕೂಡಲೇ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಜನರಿಗೆ ಅತ್ಯಂತ ಉಪಕಾರಿಯಾಗಿದೆ. ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿ ಕಾರ್ಡ್​​ ಅನ್ನು ಇಟ್ಟು ದೇವಿಯ ಬಳಿ ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನು ಮಾಡಲಾಗಿತ್ತು ಎಂದು ದಿನೇಶ್ ಗೂಳಿಗೌಡ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್‌ಗೆ ಗಾಯ; ವೀಲ್‌ಚೇರ್‌ನಲ್ಲಿ ಸ್ಥಳಾಂತರ, Video!

ಜುಬೀನ್ ಗರ್ಗ್ ಸಾವಿನ ಪ್ರಕರಣ: ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿ ಬಂಧಿಸಿದ SIT

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

SCROLL FOR NEXT