ರಾಜ್ಯ

8 ವಲಯಗಳಿಂದಲೂ ಸಾಥ್‌ ನೀಡಿ 'ಬೆಂಗಳೂರು ಹಬ್ಬ' ಯಶಸ್ಸುಗೊಳ್ಳುವಂತೆ ಮಾಡಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 'ಬೆಂಗಳೂರು ಹಬ್ಬ'ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯ 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು: ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 'ಬೆಂಗಳೂರು ಹಬ್ಬ'ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆಯ 8 ವಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಬೆಂಗಳೂರು ಹಬ್ಬ’ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿ, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರ್ಯಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಹಬ್ಬ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರಿನ ಬ್ರಾಂಡ್‌ನಲ್ಲಿ ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಅಧಿಕಾರಿಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು,

ಹಬ್ಬಕ್ಕೆ ಜಂಕ್ಷನ್‌ಗಳು, ಫ್ಲೈಓವರ್‌ಗಳು, ಉದ್ಯಾನವನಗಳುಸ ಮಾರುಕಟ್ಟೆಗಳಂತಹ ಪ್ರಮುಖ ಸ್ಥಳಗಳನ್ನು ಗುರುತಿಸಲಾಗುತ್ತದೆ. ಪಾರಂಪರಿಕ ಕಟ್ಟಡಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳ ಮೇಲೆ ವಿದ್ಯುತ್ ದೀಪದ ವ್ಯವಸ್ಥೆ ಮಾಡಬೇಕಿದ್ದು, ಈ ಎಲ್ಲಾ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಬೆಂಗಳೂರು ಹಬ್ಬ ನಿರ್ದೇಶಕ ವಿ ರವಿಚಂದರ್ ಮಾತನಾಡಿ, ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ‘ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ’ವನ್ನು ಆಚರಿಸಲಾಗುತ್ತಿದ್ದು, ಇದನ್ನು 12 ವಿಭಾಗಗಳಾಗಿ ವಿಂಗಡಿಸಲಾಗಿದೆ. ಉತ್ಸವಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಮತ್ತು ನಾಗರಿಕರು ಉತ್ಸವದ ಬಗ್ಗೆ ವಿವರಗಳನ್ನು https://habba.unboxingblr.com/ ನಲ್ಲಿ ಪಡೆಯಬಹುದು ಮತ್ತು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT