ಅಗ್ನಿ ಅವಘಡ 
ರಾಜ್ಯ

ಬೆಂಗಳೂರು: ಕುಂಬಾರಪೇಟೆ ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ ಮಹಡಿವರೆಗೂ ಹಬ್ಬಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು. ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT