4 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಸಂದರ್ಭ 
ರಾಜ್ಯ

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀಗೆ ಬಂಧನ ಭೀತಿ: 2ನೇ ಪೋಕ್ಸೋ ಕೇಸ್​ ನಲ್ಲಿ ಅರೆಸ್ಟ್ ವಾರಂಟ್ ಜಾರಿ

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. 

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. 

ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ. 

2ನೇ ಪೋಕ್ಸೋ ಕೇಸ್​ನಲ್ಲಿ ಅರೆಸ್ಟ್ ವಾರಂಟ್​​ ಜಾರಿ ಮಾಡಿದ ಕೋರ್ಟ್​​, 1ನೇ ಪೋಕ್ಸೋ ಕೇಸ್​ನಲ್ಲಿ ಹೈಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಬಂಧನದ ಭೀತಿ ಎದುರಾಗಿದೆ.

ಮಠದ ಸುತ್ತ ಬಿಗಿ ಭದ್ರತೆ: ಮುರುಘಾ ಶ್ರೀಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು, ಬೆಂಬಲಿಗರು ಇರುವುದರಿಂದ ಅಹಿತಕರ ಘಟನೆ ನಡೆಯದಂತೆ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT