ಹೆಜ್ಜೇನು ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಾಮಕರಣ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ (Honeybee Attack) ಮಾಡಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 47 ವರ್ಷದ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.

ಕಡಬ ಹೋಬಳಿ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ನಡೆಯುತ್ತಿದ್ದಾಗ ದಿಢೀರನೆ ಹೆಜ್ಜೇನು ನೋಣಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

'ಮಿತವ್ಯಯ'ಕ್ಕಾಗಿ ಮೋದಿ ಸಲಹೆಯನ್ನು ದೇಶದ ಜನ ಸ್ವಾಗತಿಸಬೇಕು- ಮಾಜಿ ಪ್ರಧಾನಿ HD Devegowda

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

SCROLL FOR NEXT