ಹೆಜ್ಜೇನು ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಾಮಕರಣ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ (Honeybee Attack) ಮಾಡಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 47 ವರ್ಷದ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.

ಕಡಬ ಹೋಬಳಿ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ನಡೆಯುತ್ತಿದ್ದಾಗ ದಿಢೀರನೆ ಹೆಜ್ಜೇನು ನೋಣಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT