ಸಂಗ್ರಹ ಚಿತ್ರ 
ರಾಜ್ಯ

ನಗರದ ಅಪಾರ್ಟ್‌ಮೆಂಟ್‌ನಲ್ಲಿ 11 ಬೆಕ್ಕುಗಳ ಸರಣಿ ಸಾವು: ಪೊಲೀಸ್ ಠಾಣೆ ಮೆಟ್ಟಿಲೇರಿದ ಉದ್ಯಮಿ!

ಪ್ರೀತಿಯಿಂದ ಸಾಕಿ ಸಲಹಿದ್ದ ಬೆಕ್ಕುಗಳು ದಿಢೀರನೇ ಒಂದರ ಹಿಂದೆ ಒಂದಂತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಗರದಲ್ಲಿ ವರದಿಯಾಗಿದೆ.

ಬೆಂಗಳೂರು: ಪ್ರೀತಿಯಿಂದ ಸಾಕಿ ಸಲಹಿದ್ದ ಬೆಕ್ಕುಗಳು ದಿಢೀರನೇ ಒಂದರ ಹಿಂದೆ ಒಂದಂತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಗರದಲ್ಲಿ ವರದಿಯಾಗಿದೆ.

ನಗರದ ರಾಜರಾಜೇಶ್ವರಿ ನಗರದ ತಿರುಚ್ಚಿ-ಮಹಾಸ್ವಾಮಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ವಾಸವಿರುವ ಉದ್ಯಮಿ ಶ್ಯಾಮವೀರ್ ಶರ್ಮಾ (47) ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಹಿನ್ನೆಲೆಯಲ್ಲಿ ಪೊಲೀಸರು ಅಪಾರ್ಟ್'ಮೆಂಟ್ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ದೃಶ್ಯಾವಳಿಗಳಲ್ಲಿ ಉದ್ಯಮಿಯ ಮನೆಯ ಹೊರಗೆ ಇಟ್ಟಿದ್ದ ಬೆಕ್ಕುಗಳ ಆಹಾರದ ಬಟ್ಟಲಿಗೆ ಮಹಿಳೆಯೊಬ್ಬರು ಪುಡಿ ಮಿಶ್ರಣ ಮಾಡುತ್ತಿರುವುದು ಕಂಡು ಬಂದಿದೆ.

ಶಂಕಾಸ್ಪದ ಬೆಳವಣಿಗೆಗಳು ಕಂಡುಬಂದ ಹಿನ್ನೆಲೆಯಲ್ಲಿ ಬೆಕ್ಕಳುಗಳ ಸಾವಿಗೆ ನಿಖರ ಕಾರಣಗಳ ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆ.

ನಾವಿರುವುದು ನೆಲ ಮಹಡಿಯಲ್ಲಿ. ಪ್ಯಾಸೇಜ್ ನಲ್ಲಿ ಬೆಕ್ಕುಗಳಿಗೆ ಬಟ್ಟಲಿನಲ್ಲಿ ಆಹಾರ ಇಡಲಾಗುತ್ತಿತ್ತು. ಮಹಿಳೆಯೊಬ್ಬರು ಬಟ್ಟಲುಗಳಿಗೆ ಪುಡಿ ಮಿಶ್ರಣ ಮಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ಎರಡು ವರ್ಷಗಳ ಹಿಂದೆ ಮೂರು ಬೆಕ್ಕುಗಳು ಇದೇ ರೀತಿ ಸಾವನ್ನಪ್ಪಿದ್ದವು. ಆದರೆ, ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಸಾಕ್ಷಿಗಳು ಸಿಕ್ಕಿವೆ.
 
ವಾರದ ಹಿಂದೆ 11 ಬೆಕ್ಕುಗಳ ಪೈಕಿ 7 ಬೆಕ್ಕುಗಳು ಒಂದರ ಹಿಂದಂತೆ ಸಾವನ್ನಪ್ಪಲು ಪ್ರಾರಂಭಿಸಿದ್ದವು. ರಕ್ತಸ್ರಾವ, ವಾಂತಿ, ನಿತ್ರಾಣದಿಂದ ಅವು ಸಾವನ್ನಪ್ಪಿದ್ದವು. ವೈರಸ್ ನಿಂದ ಸಾವನ್ನಪ್ಪಿಯೇ ಎಂಬುದನ್ನು ತಿಳಿಯಲು ಬೆಕ್ಕುಗಳನ್ನು ಪಶುವೈದ್ಯರ ಬಳಿ ಕರೆದುಕೊಂಡು ಹೋಗಲಾಗಿತ್ತು. ಬೆಕ್ಕಿನ ಮರಣೋತ್ತರ ಪರೀಕ್ಷೆಯನ್ನೂ ಮಾಡಿಸಲಾಗುತ್ತಿದ್ದು, ವರದಿಗಾಗಿ ಕಾಯುತ್ತಿದ್ದೇವೆಂದು ಉದ್ಯಮಿ ಹೇಳಿದ್ದಾರೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 428 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT