ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪಹರಣಕಾರರಿಗೆ ಸಹಾಯ ಮಾಡಿದ್ದ ಪೊಲೀಸರ ಬಂಧನ!

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಡಿವಾಳ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಪೇದೆ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು   ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಡಿವಾಳ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಪೇದೆ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು   ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಯ ತಂಡವೊಂದು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಸೇರಿದಂತೆ ಸುಮಾರು 1.7 ಕೋಟಿ ರೂ. ಸುಲಿಗೆ ಮಾಡಿದ್ದರು.

ಸಂತ್ರಸ್ತರು ಹಲವು ಖಾತೆಗಳಿಗೆ ವಹಿವಾಟು ನಡೆಸಿದ್ದರು. ಅವರಿಂದ ಹಣ ವಸೂಲಿ ಮಾಡಲು ಆರೋಪಿಗಳಿಗೆ ಪ್ರೊಬೇಷನರಿ ಪಿಎಸ್ ಐ ನೆರವಾಗಿದ್ದಾರೆ. ಆರೋಪಿಗಳು ವಿರುದ್ಧ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.ನಂತರ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಆರೋಪಿಗಳಲ್ಲಿ ಒಬ್ಬನನ್ನು ನವೆಂಬರ್ 10 ರಂದು ಬಂಧಿಸಲಾಗಿತ್ತು.

"ನವೆಂಬರ್ 15 ರಂದು ಪ್ರೊಬೇಷನರಿ ಪಿಎಸ್‌ಐ, ಕಾನ್‌ಸ್ಟೆಬಲ್ ಮತ್ತು ಗೃಹ ರಕ್ಷಕರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಸೆರೆಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ" ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಸೋಮವಾರ ತಿಳಿಸಿದೆ. ಪ್ರೊಬೇಷನರಿ ಪಿಎಸ್‌ಐ ಸಿದ್ಧಾರೂಢ ಬಿಜ್ಜಣ್ಣನವರ್, ಪೊಲೀಸ್ ಪೇದೆ ಅಲ್ಲಾ ಬಕ್ಷ್ ಮತ್ತು ಹೋಮ್ ಗಾರ್ಡ್ ರಾಜ್ ಕಿಶೋರ್ ಎಂದು ಗುರುತಿಸಲಾಗಿದೆ. ನವೆಂಬರ್ 10 ರಿಂದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ಕಾರ್ತಿಕ್ ಅವರನ್ನು ಕೆಜಿ ಹಳ್ಳಿ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ ಮಾಡಿದ್ದರು. 

ಕಾರ್ತಿಕ್‌ನಿಂದ ಹಣ ವಸೂಲಿ ಮಾಡಲು ಕಿಶೋರ್, ಬಿಜ್ಜಣ್ಣನವರ್ ಅವರ ಸಹಾಯ ಕೇಳಿದ್ದರು. ಕಾರ್ತಿಕ್ ತನ್ನ ಸಹೋದರನಿಂದ ಹಣ ಪಡೆದಿದ್ದಾಗಿ ಪ್ರೊಬೇಷನರಿ ಪಿಎಸ್ ಐಗೆ ಹೋಮ್ ಗಾರ್ಡ್ ತಿಳಿಸಿದ್ದಾರೆ. ಕಾರ್ತಿಕ್ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿದ ನಂತರ ಬಿಜ್ಜಣ್ಣನವರ್ ತಮ್ಮ ಅಧಿಕೃತ ಅಧಿಕಾರ ಬಳಸಿ ಹಣ ವಸೂಲಿ ಮಾಡಿದ್ದರು. ಜುಲೈನಲ್ಲಿ ಈ ಘಟನೆ ನಡೆದಿದ್ದು, ಈ ಹಿಂದೆ ಕೆ.ಜಿ.ಹಳ್ಳಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು.

ವಂಶಿ ಕೃಷ್ಣ, ಕಿಶೋರ್ ಮತ್ತು ವಿನೋದ್ ನಾಯಕ್ ಎಂಬ ಇತರ ಮೂವರನ್ನು ಈ ಹಿಂದೆ ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ ನಂತರ, ಬಿಜ್ಜಣ್ಣನವರ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಿಸಿಬಿಗೆ ಲಗತ್ತಿಸಲಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT