ಸುನೀಲ್ ಕುಮಾರ್ ಮತ್ತು ಸಿದ್ದರಾಮಯ್ಯ 
ರಾಜ್ಯ

'ರಾಹುಲ್ ಗಾಂಧಿಯವರ ಹೇಳಿಕೆಯ‌ನ್ನು ಗುರಾಣಿಯಾಗಿಸಿಕೊಂಡು ಸ್ವಪಕ್ಷೀಯರ ವಿರೋಧ ತಪ್ಪಿಸಿಕೊಳ್ಳಲು ಹವಣಿಸುತ್ತಿದ್ದೀರಿ'

ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕ ಸುನೀಲ್ ಕುಮಾರ್, ನಿರ್ಧಾರ ಪ್ರತಿಪಾದಿಸುತ್ತಲೇ ನೀವು(ಸಿದ್ದರಾಮಯ್ಯ) ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದಿದ್ದಾರೆ.

‘ಜಾತಿ ಗಣತಿ ವರದಿಯನ್ನು ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ದಿನದೂಡುವ ಬದಲು ಸಾರ್ವಜನಿಕವಾಗಿ ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುವುದಕ್ಕಾದರೂ ಸರ್ಕಾರ ವೇದಿಕೆ ಸೃಷ್ಟಿಸಲಿ. ವರದಿಯ ವೈಜ್ಞಾನಿಕತೆಯ ಬಗ್ಗೆ ಸ್ಪಷ್ಟನೆ ಕೊಡಿ’ ಎಂದು ಹೇಳಿದ್ದಾರೆ.

‘ರಾಹುಲ್ ಗಾಂಧಿಯವರ ಹೇಳಿಕೆಯ‌ನ್ನು ಗುರಾಣಿಯಾಗಿಸಿಕೊಂಡು ನೀವು(ಸಿದ್ದರಾಮಯ್ಯ) ಸ್ವಪಕ್ಷೀಯರ ವಿರೋಧವನ್ನು ತಪ್ಪಿಸಿಕೊಳ್ಳಲು ಹವಣಿಸುತ್ತಿರಬಹುದು. ಆದರೆ, ಹಿಂದುಳಿದ ವರ್ಗ ಹಾಗೂ ಸಮಾಜದಲ್ಲಿ ಅನಪೇಕ್ಷಿತ ಗೊಂದಲ ಹಾಗೂ ಅನುಮಾನವನ್ನು ಸೃಷ್ಟಿಸಬೇಡಿ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT