ಸುನೀಲ್ ಕುಮಾರ್ ಮತ್ತು ಸಿದ್ದರಾಮಯ್ಯ 
ರಾಜ್ಯ

'ರಾಹುಲ್ ಗಾಂಧಿಯವರ ಹೇಳಿಕೆಯ‌ನ್ನು ಗುರಾಣಿಯಾಗಿಸಿಕೊಂಡು ಸ್ವಪಕ್ಷೀಯರ ವಿರೋಧ ತಪ್ಪಿಸಿಕೊಳ್ಳಲು ಹವಣಿಸುತ್ತಿದ್ದೀರಿ'

ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕ ಸುನೀಲ್ ಕುಮಾರ್, ನಿರ್ಧಾರ ಪ್ರತಿಪಾದಿಸುತ್ತಲೇ ನೀವು(ಸಿದ್ದರಾಮಯ್ಯ) ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದಿದ್ದಾರೆ.

‘ಜಾತಿ ಗಣತಿ ವರದಿಯನ್ನು ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ದಿನದೂಡುವ ಬದಲು ಸಾರ್ವಜನಿಕವಾಗಿ ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುವುದಕ್ಕಾದರೂ ಸರ್ಕಾರ ವೇದಿಕೆ ಸೃಷ್ಟಿಸಲಿ. ವರದಿಯ ವೈಜ್ಞಾನಿಕತೆಯ ಬಗ್ಗೆ ಸ್ಪಷ್ಟನೆ ಕೊಡಿ’ ಎಂದು ಹೇಳಿದ್ದಾರೆ.

‘ರಾಹುಲ್ ಗಾಂಧಿಯವರ ಹೇಳಿಕೆಯ‌ನ್ನು ಗುರಾಣಿಯಾಗಿಸಿಕೊಂಡು ನೀವು(ಸಿದ್ದರಾಮಯ್ಯ) ಸ್ವಪಕ್ಷೀಯರ ವಿರೋಧವನ್ನು ತಪ್ಪಿಸಿಕೊಳ್ಳಲು ಹವಣಿಸುತ್ತಿರಬಹುದು. ಆದರೆ, ಹಿಂದುಳಿದ ವರ್ಗ ಹಾಗೂ ಸಮಾಜದಲ್ಲಿ ಅನಪೇಕ್ಷಿತ ಗೊಂದಲ ಹಾಗೂ ಅನುಮಾನವನ್ನು ಸೃಷ್ಟಿಸಬೇಡಿ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

'ಜನ ಸಾಮಾನ್ಯರಿಗಾಗಿ ಸುಪ್ರೀಂಕೋರ್ಟ್' : ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

Puri Jagannath Temple: ಒಡಿಶಾ ಅಲ್ಲದೇ ಇತರ ಆರು ರಾಜ್ಯಗಳಲ್ಲಿ ಎಕರೆಗಟ್ಟಲೇ ಜಮೀನು! ಒಟ್ಟು ಎಷ್ಟಿದೆ ಗೊತ್ತಾ?

SCROLL FOR NEXT