ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸಾಲ ತೀರಿಸಲು ಎಳನೀರು ಕದಿಯುತ್ತಿದ್ದ ಕ್ಯಾಬ್ ಚಾಲಕನ ಬಂಧನ

ಸಾಲ ತೀರಿಸಲು ರಸ್ತೆ ಬದಿಗಳಲ್ಲಿದ್ದ ಎಳನೀರುಗಳನ್ನು ಕದಿಯುತ್ತಿದ್ದ ಕ್ಯಾಬ್ ಚಾಲಕನೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಸಾಲ ತೀರಿಸಲು ರಸ್ತೆ ಬದಿಗಳಲ್ಲಿದ್ದ ಎಳನೀರುಗಳನ್ನು ಕದಿಯುತ್ತಿದ್ದ ಕ್ಯಾಬ್ ಚಾಲಕನೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ತಮಿಳುನಾಡು ಮೂಲಕ ಮೋಹನ್ ಶಿವಲಿಂಗಾ (30) ಬಂಧಿತ ಆರೋಪಿ. ಈತ ಮಡಿವಾಳದಲ್ಲಿ ವಾಸವಿದ್ದು, ಆರಂಭದಲ್ಲಿ ಎಳನೀರು ಮಾರಾಟ ಮಾಡುತ್ತಿದ್ದ ಇವರು, ನಂತರ ಕ್ಯಾಬ್ ಚಾಲಕನಾಗಿ ವೃತ್ತಿ ಆರಂಭಿಸಿದ್ದ. ಆದರೆ, ಆದಾಯ ಕಡಿಮೆ ಬರುತ್ತಿದ್ದ ಹಿನ್ನಲೆಯಲ್ಲಿ ರಸ್ತೆಬದಿಯಲ್ಲಿ ಇರಿಸಲಾಗುತ್ತಿದ್ದ ಎಳನೀರುಗಳನ್ನು ಕದಿಯಲು ಆರಂಭಿಸಿದ್ದ. ಕದ್ದ ಎಳನೀರನ್ನು ಮಾರಾಟ ಮಾಡುತ್ತಿದ್ದ.

ರಾತ್ರಿ ವೇಳೆ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಿರುತ್ತಿದ್ದ ಎಳನೀರುಗಳನ್ನು ಕ್ಯಾಬ್ ನಲ್ಲಿ ತುಂಬಿಕೊಂಡು ಆರೋಪಿ ಹೋಗುತ್ತಿದ್ದ. ಗಿರಿನಗರದ ಉದ್ಯಾನವನದ ಬಳಿ ಎಳನೀರು ಕಳ್ಳತನವಾಗಿರುವ ಕುರಿತು ಮಾರಾಟಗಾರ ರಾಜಣ್ಣ ಅವರು ದೂರು ನೀಡಿದ್ದರು. 1,150 ಎಳನೀರು ಕಳ್ಳತನವಾಗಿರುವುದಾಗಿ ದೂರಿನಲ್ಲಿ ಹೇಳಿಕೊಂಡಿದ್ದರು.

 ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಇದರಂತೆ ಮೋಹನ್ ನನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯಿಂದ 90 ತೆಂಗಿನಕಾಯಿ, ಸುಮಾರು 8.75 ಲಕ್ಷ ರೂಪಾಯಿ ಮೌಲ್ಯದ ಒಂದು ಬುಲೆಟ್ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT