ಕೆಆರ್ ಎಸ್ 
ರಾಜ್ಯ

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ನೀರು ಹಾಗೂ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ತಮಿಳುನಾಡು ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಇದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವುದಕ್ಕೂ ನೀರು ಸಂಗ್ರಹ ಇಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ.

ಅಂತಿಮವಾಗಿ ತಮಿಳುನಾಡು ಬೇಡಿಕೆ ತಿರಸ್ಕರಿಸಿದ CWRC, ಕರ್ನಾಟಕಕ್ಕೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT