'ಸೇಫ್ ಸಿಟಿ ಕಮಾಂಡ್ ಸೆಂಟರ್' 
ರಾಜ್ಯ

'ನಿರ್ಭಯಾ ನಿಧಿ'ಯಡಿ 'ಸೇಫ್ ಸಿಟಿ ಕಮಾಂಡ್ ಸೆಂಟರ್' ನಿರ್ಮಾಣ: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಪೊಲೀಸರು ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬಿಗಿ ನಿಗಾ ಇಡಬೇಕು ಮತ್ತು ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು: ಪೊಲೀಸರು ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬಿಗಿ ನಿಗಾ ಇಡಬೇಕು ಮತ್ತು ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ 'ಸೇಫ್ ಸಿಟಿ ಕಮಾಂಡ್ ಸೆಂಟರ್' ನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದರು.

ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪರಾಧಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸಲು ‘ನಿರ್ಭಯಾ ನಿಧಿ’ ಬಳಸಿ 668 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕೇಂದ್ರವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು. 

ನಗರವು ಎಲ್ಲರಿಗೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಒಂಟಿ ಮನೆಗಳ ಮೇಲೆ ಮತ್ತು ಒಂಟಿ ಮಹಿಳೆಯರು ವಾಸಿಸುವ ನಿವಾಸಗಳ ಮೇಲೆ ಪೊಲೀಸರು ನಿಗಾ ಇಡಬೇಕು ಎಂದರು.

ನಗರದಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸರು ಗಮನಹರಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆಯಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.

ಅಪರಾಧಗಳು ನಡೆಯದಂತೆ ನೋಡಿಕೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ ಅವರು, ಅಪರಾಧ ನಡೆದ ನಂತರ ಅಪರಾಧಿಯನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಇದರಿಂದ ಸಮಾಜದಲ್ಲಿ ತಪ್ಪು ಕೆಲಸ ಮಾಡುವವರಿಗೆ ಬಿಸಿ ಮುಟ್ಟಿಸಿದಂತಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT