ರಾಜ್ಯ

ಸೇನಾ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅಂತ್ಯಕ್ರಿಯೆ

Srinivas Rao BV

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು.
 
ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಅಮರ್ ರಹೇ ಘೋಷಣೆಯೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿತು.

ಶನಿವಾರ ಬೆಳಗ್ಗೆ 8ರಿಂದಲೂ ಜಿಗಣಿ ಸಮೀಪದ ನಂದನವದಲ್ಲಿನ ಪ್ರಾಂಜಲ್‌ ಅವರ ನಿವಾಸದ ಮುಂಭಾಗದಲ್ಲಿ ಪ್ರಾಂಜಲ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಪೊಲೀಸ್‌ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆಯ ನಂತರ ಪಾರ್ಥೀವ ಶರೀರವನ್ನು ಪ್ರಾಂಜಲ್‌ ಅವರ ಮನೆಗೆ ಕೊಂಡೊಯ್ಯಲಾಯಿತು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ  ಸೋಮಸುಂದರಪಾಳ್ಯದಲ್ಲಿನ ವಿದ್ಯುತ್‌ ಚಿತಾಗಾರದಲ್ಲಿ ಪ್ರಾಂಜಲ್‌ ಅವರ ಅಂತ್ಯಕ್ರಿಯೆ ನೆರವೇರಿತು.

SCROLL FOR NEXT