ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!

ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ಧಾರವಾಡ: ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ವಿದ್ಯುತ್ ತಂತಿ ತಗುಲಿದ ತಕ್ಷಣ ಬಿಡಿಸಲು ಹೋಗಿದ್ದ ಮತ್ತೋರ್ವ ಬಾಲಕ ಗಾಯಗೊಂಡಿದ್ದಾರೆ. ಶ್ರೇಯಸ್​ ಸ್ನೇಹಿತ ಪ್ರಣವ್​ ಕೈಗೆ ಗಾಯವಾಗಿದೆ. ಸಂಜೆ ವೇಳೆ ಮನೆಯ ಮೇಲೆ ಹತ್ತಿದ ಬಾಲಕ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದು, ಇನ್ನು ಗಾಯಗೊಂಡ ಪ್ರಣವ್​ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಜೆ 5ಕ್ಕೆ ಶಾಲೆಯಿಂದ ಬಂದು ಮನೆಯಲ್ಲಿ ಮೊಬೈಲ್ ಹಿಡಿದು ಕುಳಿತಿದ್ದ, ಆಗ ಆಟ ಆಡಲು ಗೆಳೆಯ ಕರೆದಿದ್ದಾನೆ. ಆಗ ಹೊರಗೆ ಹೋಗಿದ್ದಾನೆ. ಇಬ್ಬರೂ ಪ್ರತಿದಿನ ಸಂಜೆ ಆಟ ಆಡುತ್ತಿದ್ದರು. ಚೆಂಡು ತೆಗೆದುಕೊಂಡು ಹೋಗಿದ್ದ ಆತ, ಹೋದ ಹತ್ತೇ ನಿಮಿಷದಲ್ಲಿ ಮಗ ಬಿದ್ದಿದ್ದಾನೆಂದು ಎಂದು ಕರೆದರು ಎಂದು ಘಟನೆ ಬಗ್ಗೆ  ಶ್ರೇಯಸ್ ತಂದೆ ವಿವರಿಸಿದ್ದಾರೆ.

ಓಡಿ ಹೋಗಿ ನೋಡಿದಾಗ ವಿದ್ಯುತ್ ತಗುಲಿತ್ತು. ಮನೆ ಬಳಿ ಕಟ್ಟಡ ಕಾಮಗಾರಿ ನಡೆದಿದೆ. ಅಲ್ಲಿ ಆಟ ಆಡುತ್ತಿದ್ದರು. ಗೆಳೆಯ ಎಸೆದ ಬಾಲು ಹಿಡಿಯಲು ಹೋದಾಗ ವಿದ್ಯುತ್ ತಗುಲಿದೆ. ಕೈಯಿಂದ ಹೊಟ್ಟೆಯವರೆಗೆ ವಿದ್ಯುತ್ ಶಾಕ್ ಹೊಡೆದಿತ್ತು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇವೆ. ನಾನು ವೈದ್ಯರ ಕಾಲಿಗೂ ಬಿದ್ದು, ಮಗನನ್ನು ಉಳಿಸಿಕೊಡುವಂತೆ ಕೇಳಿದೆ.

ಆದರೆ ಮಗ ಉಳಿಯಲಿಲ್ಲ. ಮಗ ನಗರದ ರಾಜೀವ್ ಗಾಂಧಿ ಶಾಲೆಯಲ್ಲಿ ಎ‌ಸ್‌ಎಸ್‌ಎಲ್‌ಸಿ ಓದುತ್ತಿದ್ದ. ಆತನನ್ನು ಉಳಿಸಲು ಇನ್ನೋರ್ವ ಬಾಲಕ ಪ್ರಯತ್ನ ಪಟ್ಟಿದ್ದಾನೆ. ಆತನಿಗೂ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್​ ನನಗೆ ಒಬ್ಬನೇ ಮಗ ಎಂದು ಗೋಳಾಡಿದರು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT