ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ ಇಂದು; ಅಂತಿಮ ದರ್ಶನಕ್ಕೆ ಅವಕಾಶ; ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ

ಜಮ್ಮು - ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಮೊನ್ನೆ ಬುಧವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕ ಮೂಲ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌((Captain Pranjal)​  ಅವರ ಅಂತ್ಯಕ್ರಿಯೆ ಇಂದು ಶನಿವಾರ ನೆರವೇರಲಿದೆ. 

ಬೆಂಗಳೂರು: ಜಮ್ಮು - ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಮೊನ್ನೆ ಬುಧವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕ ಮೂಲ ಯೋಧ 29 ವರ್ಷದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌((Captain Pranjal)​  ಅವರ ಅಂತ್ಯಕ್ರಿಯೆ ಇಂದು ಶನಿವಾರ ನೆರವೇರಲಿದೆ. 

ಅಂತಿಮ ದರ್ಶನಕ್ಕೆ ಅವಕಾಶ: ಕ್ಯಾಪ್ಟನ್​ ಪ್ರಾಂಜಲ್ ಪಾರ್ಥಿವ ಶರೀರ ಕಳೆದ ರಾತ್ರಿಯೇ ಬೆಂಗಳೂರು ತಲುಪಿದೆ. ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ತರಲಾದ ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜ ಹೊದಿಸಿ ಹೊರಗೆ ತರಲಾಯಿತು.

ಆ ಬಳಿಕ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ಅವರ ತಂದೆ-ತಾಯಿ ಮೊದಲಿಗೆ ಪುಷ್ಪಗುಚ್ಛ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು. ಆ ಬಳಿಕ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ , ಕೆ.ಜೆ ಜಾರ್ಜ್​, ಬಿ ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಅಂತಿಮ ನಮನ ಸಲ್ಲಿಸಿದರು. ನಂತರ ಬೆಂಗಳೂರು ಹೊರವಲಯ ಜಿಗಣಿಗೆ ಕ್ಯಾಪ್ಟನ್​​ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ಇಂದು ಆನೇಕಲ್ ನಲ್ಲಿ ನೆರವೇರಲಿದೆ. ಸರ್ಕಾರದ ಪರವಾಗಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾಗವಹಿಸಲಿದ್ದಾರೆ. 

50 ಲಕ್ಷ ರೂ. ಪರಿಹಾರ: ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು. ಕ್ಯಾಪ್ಟನ್ ಪ್ರಾಂಜಲ್‌ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್‌ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್‌ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು ಎಂದು ಸ್ಮರಿಸಿದರು.

ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ. ಸರ್ಕಾರದಿಂದ ಈಗ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. 

ಇಂದು ಅಂತ್ಯ ಸಂಸ್ಕಾರ:ಕ್ಯಾಪ್ಟನ್ ಪ್ರಾಂಜಲ್‌ ಪಾರ್ಥಿವ ಶರೀರವನ್ನು ಬನ್ನೇರುಘಟ್ಟದಲ್ಲಿರುವ ಅವರ ನಿವಾಸಕ್ಕೆ ನಿನ್ನೆ ಕೊಂಡೊಯ್ಯಲಾಗಿದೆ. ಇಂದು ಬೆಳಗ್ಗೆ ಪುಷ್ಪ ನಮನ ಮತ್ತು ಸೇನಾ ಗೌರವದ ನಂತರ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್: ಕ್ಯಾಪ್ಟನ್​ ಶುಭಂ ಗುಪ್ತಾ, ಹವಾಲ್ದಾರ್ ಅಬ್ದುಲ್ ಮಜೀದ್, ಲ್ಯಾನ್ಸ್ ನಾಯಕ್ ಸಂಜಯ್ ಬಿಷ್ತ್, ಪ್ಯಾರಾಟ್ರೂಪರ್ ಸಚಿನ್ ಲಾರ್ ಮೊನ್ನೆ ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್‌ ಅರಣ್ಯ ಪ್ರದೇಶದಲ್ಲಿ ಹುತಾತ್ಮರಾದ ವೀರ ಯೋಧರಾಗಿದ್ದು, ಅವರಲ್ಲಿ ಕ್ಯಾಪ್ಟನ್ ಪ್ರಾಂಜಲ್ ಕರ್ನಾಟಕದವರು. 

ಮಂಗಳೂರಿನಲ್ಲಿ ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್‌ ಹಾಗೂ ಅನುರಾಧ ದಂಪತಿಯ ಏಕೈಕ ಪುತ್ರ ಪ್ರಾಂಜಲ್‌ ಮಂಗಳೂರಿನಲ್ಲಿ ಹುಟ್ಟಿ ಬೆಳೆದು, ಮಧ್ಯಪ್ರದೇಶದ ಮಿಲಿಟರಿ ಕಾಲೇಜ್‌ ಆಫ್‌ ಟೆಲಿಕಮ್ಯುನಿಕೇಶನ್‌ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಪಡೆದು, ನೇರವಾಗಿ ಭಾರತೀಯ ಸೇನೆ ಸೇರಿದ್ದರು. ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್‌ ಅವರ ವಿವಾಹ ನೆರವೇರಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂ.ಟೆಕ್‌ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT