ಸಂಗ್ರಹ ಚಿತ್ರ 
ರಾಜ್ಯ

ಹವಾಮಾನ: ಕಂಬಳಕ್ಕೆ ತಂಪೆರೆದ ವರುಣ, ಮಳೆಯಲ್ಲೂ ಕೋಣಗಳ ಭರ್ಜರಿ ಓಟ

ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ.

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ತೆರೆದ ಆವರಣದಲ್ಲಿ ನಿರ್ಮಿಸಲಾಗಿರುವ 155 ಮೀಟರ್‌ ಗಟ್ಟಿ ಕರೆಯಲ್ಲಿ ಕೋಣಗಳಿಗೆ ಓಡಲು ಅತ್ಯಂತ ಸೂಕ್ತವಾಗಿದೆ ಎಂಬುದನ್ನು ದೃಢಪಡಿಸಿಕೊಳ್ಳಲು ಕೋಣಗಳನ್ನು ಸಾಂಕೇತಿಕವಾಗಿ ಓಡಿಸಲಾಯಿತು. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು.

ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಸಾಕ್ಷಿಯಾದರು. ಇನ್ನು ಕಂಬಳ ಕೆರೆಗೆ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಲಾಗಿದೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.

ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.

ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ, ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

ಗೆದ್ದ ಕೋಣಗಳಿಗೆ ಬಹುಮಾನ ಇಂತಿದೆ...
ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು
ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು
ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT