ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಒಂಬತ್ತು ತಿಂಗಳ ಮೊಮ್ಮಗುವನ್ನು ಕೊಂದ ಅಜ್ಜಿ; ಮೃತ ಶಿಶುವಿನ ತಾಯಿಯಿಂದ ದೂರು ದಾಖಲು

ಮೃತ ಅದ್ವಿಕ್ ಅವರ ತಾಯಿ ನಾಗರತ್ನ ಅವರು ಗಜೇಂದ್ರಗಢ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅತ್ತೆ ಸರೋಜಾ ಅವರು ಮಗುವನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಗದಗ: ವೃದ್ಧೆಯೊಬ್ಬರು ತನ್ನ ಒಂಬತ್ತು ತಿಂಗಳ ಮೊಮ್ಮಗನನ್ನು ಕೊಂದಿದ್ದಾರೆ ಎಂಬ ಆರೋಪ  ಗದಗದಲ್ಲಿ ಕೇಳಿ ಬಂದಿದೆ.

ಮೃತ ಅದ್ವಿಕ್ ಅವರ ತಾಯಿ ನಾಗರತ್ನ ಅವರು ಗಜೇಂದ್ರಗಢ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅತ್ತೆ ಸರೋಜಾ ಅವರು ಮಗುವನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆರಿಗೆಯಾದ ಐದು ತಿಂಗಳ ನಂತರ ಅತ್ತೆಯ ಮನೆಗೆ ಬಂದಿರುವುದಾಗಿ ನಾಗರತ್ನ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಇಷ್ಟು ಚಿಕ್ಕ ವಯಸ್ಸಿನಲ್ಲೇ  ಮಗು ಮಾಡಿಕೊಂಡಿದ್ದಕ್ಕೆ ನಾಗರತ್ನ ವಿರುದ್ಧ ಸರೋಜಾ ಅಸಮಾಧಾನ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಇಷ್ಟಕ್ಕೂ ನಿಲ್ಲದ ಮಹಿಳೆ ಶಿಶುವಿಗೆ ವೀಳ್ಯದೆಲೆ ಮತ್ತು ಸೊಪ್ಪನ್ನು ನುಂಗುವಂತೆ ಮಾಡಿದ್ದು ಆತನ ಸಾವಿಗೆ ಕಾರಣವಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ. ನವೆಂಬರ್ 22 ರಂದು ಅಂತಿಮ ವಿಧಿವಿಧಾನಗಳನ್ನು ನಡೆಸಲಾಯಿತು.

ಆಕೆಯ ದೂರಿನ ಆಧಾರದ ಮೇಲೆ ನವೆಂಬರ್ 24 ರಂದು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಏತನ್ಮಧ್ಯೆ, ಆರೋಪಿ ಅಜ್ಜಿ ತನ್ನ ಸೊಸೆಯ ಆರೋಪವನ್ನು ತಳ್ಳಿಹಾಕಿದ್ದಾರೆ, ತಮ್ಮ ವಿರುದ್ಧ ಸೊಸೆ ಮಾಡುತ್ತಿರುವ ಆರೋಪ ನಿರಾಧಾರ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ  ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT