ಆಸಿಡ್ ದಾಳಿ (ಸಾಂಕೇತಿಕ ಚಿತ್ರ) 
ರಾಜ್ಯ

ಆಸಿಡ್ ದಾಳಿ ವಿರುದ್ಧ ರಕ್ಷಣೆಗೆ 25 ಮಂದಿ ವೃತ್ತಿಪರರಿಗೆ ತರಬೇತಿ!

ರಾಜ್ಯದಲ್ಲಿ ಆಸಿಡ್ ದಾಳಿ ವಿರುದ್ಧ ರಕ್ಷಣೆ ನೀಡುವುದಕ್ಕಾಗಿ 25 ಮಂದಿ ವೃತ್ತಿಪರರಿಗೆ ವಿಶೇಷ ತರಬೇತಿ ನೀಡಲಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಆಸಿಡ್ ದಾಳಿಯ ವಿರುದ್ಧ ಯೋಧರ ತಂಡ ಅಸ್ತಿತ್ವಕ್ಕೆ ಬರಲಿದೆ.

 ಬೆಂಗಳೂರು: ರಾಜ್ಯದಲ್ಲಿ ಆಸಿಡ್ ದಾಳಿ ವಿರುದ್ಧ ರಕ್ಷಣೆ ನೀಡುವುದಕ್ಕಾಗಿ 25 ಮಂದಿ ವೃತ್ತಿಪರರಿಗೆ ವಿಶೇಷ ತರಬೇತಿ ನೀಡಲಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಆಸಿಡ್ ದಾಳಿಯ ವಿರುದ್ಧ ಯೋಧರ ತಂಡ ಅಸ್ತಿತ್ವಕ್ಕೆ ಬರಲಿದೆ.

ದೇಶಾದ್ಯಂತ ಆಸಿಡ್ ದಾಳಿ ಸಂತ್ರಸ್ತರಿಗೆ ಮಹತ್ವದ ನೆರವು, ರಕ್ಷಣೆ ನೀಡುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಈ ತಂಡ ಮಾಡಲಿದೆ. ಪ್ರಥಮ ಚಿಕಿತ್ಸೆ, ಮಾನಸಿಕ ಸಮಾಲೋಚನೆ, ಭಾವನಾತ್ಮಕ ಸಬಲೀಕರಣದ ಸೇವೆಗಳು ಈ ತಂಡದಿಂದ ಲಭ್ಯವಾಗಲಿದೆ. 

ವೃತ್ತಿಪರರು ಭಿನ್ನ ರೀತಿಯ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಲು ಹೈಬ್ರಿಡ್-ಮಾದರಿಯ ತರಬೇತಿಯನ್ನು ಪಡೆದಿದ್ದಾರೆ.  ವಸಂತನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಸುನಿತಾ ಕೆ ಮಣಿ ನೇತೃತ್ವದ Emotional First Aid Academy (ಎಮೋಷನಲ್ ಫರ್ಸ್ಟ್ ಏಡ್ ಅಕಾಡೆಮಿ)ಯಿಂದ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಸುನಿತಾ ಅವರು ಆಸಿಡ್ ದಾಳಿಯ ಸಂತ್ರಸ್ತರು ಎದುರಿಸುತ್ತಿರುವ ಭೀಕರತೆಯನ್ನು ವಿವರಿಸಿದರು ಮತ್ತು ಅವರ ಜೀವನವನ್ನು ಪುನರ್ನಿರ್ಮಿಸಲು ಸಂತ್ರಸ್ತರನ್ನು ಸಬಲೀಕರಣಗೊಳಿಸುವುದು ತರಬೇತಿಯ ಉದ್ದೇಶವನ್ನು ತಿಳಿಸಿದರು. ದೈಹಿಕ ಚಿಕಿತ್ಸೆಯ ಆಚೆಗೆ, ಈ ಸಂತ್ರಸ್ತರಿಗೆ ಮಾನಸಿಕ ಮತ್ತು ಭಾವನಾತ್ಮಕ ಆರೈಕೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಈ ಉಪಕ್ರಮ ಆಸಿಡ್ ದಾಳಿಯಿಂದ ಬದುಕುಳಿದವರ ವಿವಿಧ ಅಗತ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ದಾಪುಗಾಲಿಟ್ಟಿದೆ, ಅವರ ಚೇತರಿಕೆಯ ಪ್ರಯಾಣದಲ್ಲಿ ಧನಾತ್ಮಕ ಬದಲಾವಣೆಯನ್ನು ಉತ್ತೇಜಿಸುತ್ತದೆ. ಆಸಿಡ್ ದಾಳಿ ಸಂತ್ರಸ್ತರಿಗೆ ಮಾನಸಿಕ ಮತ್ತು ಭಾವನಾತ್ಮಕ ಆರೈಕೆ ಅತ್ಯಗತ್ಯವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT