ರಾಜ್ಯ

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್​ಮ್ಯಾನ್​ ಸಾವು

Manjula VN

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್​ಮ್ಯಾನ್​ ಒಬ್ಬರು ಮೃತಪಟ್ಟಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಹೊರವಲಯದ ಚೀಮಸಂದ್ರದಲ್ಲಿ ಶನಿವಾರ ನಡೆದಿದೆ.

ಸಿದ್ದರಾಜು (42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಚೀಮಸಂದ್ರದಲ್ಲಿ ಟ್ರಾನ್ಸ್‌ಫಾರ್ಮರ್ ಅನ್ನು ಸರಿಪಡಿಸುತ್ತಿದ್ದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ ಮಲ್ಲಿಕಾರ್ಜುನ ಬಲದಂಡಿ ಅವರು ಮಾಹಿತಿ ನೀಡಿದ್ದಾರೆ.

ಹೊಸಕೋಟೆ ಮೂಲದ ಸಿದ್ದರಾಜು ಅವರು ಪತ್ನಿ, ಮಕ್ಕಳು, ಸಹೋದರನನ್ನು ಅಗಲಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ನಿರ್ಲಕ್ಷ್ಯದ ಮೂಲ ಕಾರಣ ತಿಳಿಸಿಯಲು ಬೆಸ್ಕಾಂನೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT