ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಮೀಟರ್ ಬಡ್ಡಿ ವ್ಯವಹಾರ ಕಿರುಕುಳದಿಂದಾಗಿ ತುಮಕೂರಿನಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಕರೀಬ್ ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟಿದ್ದರು.

ಇದರಂತೆ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಅವರು ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತಿಳಿಯಲಿದೆ ಎಂದು ಹೇಳಿದರು.

ನಗರ ಮತ್ತು ಜಿಲ್ಲೆಯಲ್ಲಿ ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಮೀಟರ್ ಬಡ್ಡಿ ಮಾಡುವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT