ಸಂಗ್ರಹ ಚಿತ್ರ 
ರಾಜ್ಯ

ಡಿ.5ರಿಂದ ಚಳಿಗಾಲ ಅಧಿವೇಶನ: ಬಂದೋಬಸ್ತ್‌ಗೆ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಬೆಳಗಾವಿ: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಅವರು, ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಭದ್ರತೆ ಉದ್ದೇಶಕ್ಕಾಗಿ ಒಟ್ಟು 5,000 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಡಿ.4ರಿಂದ 15ರವರೆಗೆ ಚಳಿಗಾಳ ಅಧಿವೇಶನ ನಡೆಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಐಪಿಗಳು ಹಾಗೂ ಪ್ರತಿಭಟನಾಕಾರರಿಗೆ ಭದ್ರತೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 5,000 ಪೊಲೀಸರಲ್ಲಿ 5 ಪೊಲೀಸ್ ವರಿಷ್ಠಾಧಿಕಾರಿಗಳು, 12 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 42 ಉಪ ಪೊಲೀಸ್ ವರಿಷ್ಠಾಧಿಕಾರಿಗಳು, 100 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 200 ಪಿಎಸ್‌ಐ, 35 ಕೆಎಸ್‌ಆರ್‌ಪಿ ತುಕಡಿಗಳು, ಗುಪ್ತಚರ ಅಧಿಕಾರಿಗಳು, ಶ್ವಾನ ದಳ ಮತ್ತು 3,000 ಪೊಲೀಸ್ ಪೇದೆಗಳು ಸೇರಿದ್ದಾರೆಂದು ಮಾಹಿತಿ ನೀಡಿದರು.

ಅಧಿವೇಶನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪೊಲೀಸ್ ಸಿಬ್ಬಂದಿಗೆ ವಸತಿ, ಕುಡಿಯುವ ನೀರು, ಊಟ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸುವರ್ಣ ವಿಧಾನಸೌಧದ ಬಳಿ 1,800 ಪೊಲೀಸ್ ಸಿಬ್ಬಂದಿಗೆ ಅವಕಾಶ ಕಲ್ಪಿಸುವ ಟೌನ್‌ಶಿಪ್ ನಿರ್ಮಿಸಲಾಗುತ್ತಿದೆ. ಅಲ್ಲದೆ, ಮಚ್ಚೆ ಕೆಎಸ್‌ಆರ್‌ಪಿ ಕೇಂದ್ರದಲ್ಲಿ 600, ಕಂಗ್ರಾಳಿ ಕೆಎಸ್‌ಆರ್‌ಪಿ ಕೇಂದ್ರದಲ್ಲಿ 300, ಸಾಂಬ್ರಾ ವಿಮಾನ ನಿಲ್ದಾಣದ ಬಳಿ 150 ಹಾಗೂ ಭೂತರಾಮನಹಟ್ಟಿ, ವೀರಭದ್ರೇಶ್ವರ ದೇವಸ್ಥಾನ, ಶಹಾಪುರ ದೇವಸ್ಥಾನ, ಖಾನಾಪುರ ಪೊಲೀಸ್ ತರಬೇತಿ ಕೇಂದ್ರದಲ್ಲಿ 600 ಸಿಬ್ಬಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದ 15 ಸ್ಥಳಗಳಲ್ಲಿ ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು.

ಚಳಿಗಾಲದ ಅಧಿವೇಶನಕ್ಕೆ ವಿರೋಧಿಸಿ ‘ಮಹಾ ಮೇಳವಾ’ ಪ್ರತಿಭಟನೆ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಯಿಂದ ಇದುವರೆಗೆ ಯಾವುದೇ ಮನವಿ ಪತ್ರಗಳೂ ಬಂದಿಲ್ಲ. ಮನವಿ ಪತ್ರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!