ಸಂಗ್ರಹ ಚಿತ್ರ 
ರಾಜ್ಯ

ಕಲುಷಿತ ನೀರು ಕುಡಿದು 3 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!

ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಬಂಗಾರಪೇಟೆ: ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಘಟನೆ ಬಳಿಕ ಕೆಜಿಎಫ್ ಎಸ್ಪಿ ಕೆ ಎಂ ಶಾಂತರಾಜು ಅವರು ವಸತಿ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

10 ನೇ ತರಗತಿಯ ಇಬ್ಬರು ಮತ್ತು 9ನೇ ತರಗತಿಯ ಓರ್ವ ವಿದ್ಯಾರ್ಥಿ ಅಡ್ಮಿನಿಸ್ಟ್ರೇಟಿವ್ ಬ್ಲಾಕ್‌ನಲ್ಲಿ ಇರಿಸಲಾಗಿದ್ದ ನೀರಿನ ಕ್ಯಾನ್ ನಲ್ಲಿನ ನೀರನ್ನು ಕುಡಿದಿದ್ದಾರೆ. ನೀರು ಕುಡಿದ ಕೂಡಲೇ ಮೂವರು ವಿದ್ಯಾರ್ಥಿಗಳಿಗೆ ವಾಂತಿಯಾಗಿದ್ದು, ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮೂವರನ್ನು  ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆರ್‌ಎಲ್ ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ವಿದ್ಯಾರ್ಥಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಶಾಂತರಾಜು ಅವರು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
 
ಪ್ರಾಥಮಿಕ ತನಿಖೆಯಿಂದ ಘಟನೆಯ ಹಿಂದೆ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿದೆ. ಈ ಸಂಬಂಧ ವಿಸ್ತೃತ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ವಿಚಾರ ಬೆಳಕಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿ ಪ್ರಾಣಿಗಳನ್ನು ಕೊಲ್ಲಲು ಬಳಸುವ ವಿಷದ ಪ್ಯಾಕೆಟ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನೀರನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಲಾಗುವುದು ಮತ್ತು ಈ ಸಂಬಂಧ ಐಪಿಸಿ ಸೆಕ್ಷನ್ 328 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆಯಲ್ಲಿ ಸಿಬ್ಬಂದಿಗಳ ನಡುವೆ ವೈಮನಸ್ಸು ಇರುವುದು ಪತ್ತೆಯಾಗಿದೆ. ನಿರ್ದಿಷ್ಟ ವ್ಯಕ್ತಿಗೆ ಸಮಸ್ಯೆಯಾಗುವಂತೆ ಮಾಡಲು ನೀರಿನಲ್ಲಿ ವಿಷ ಬೆರೆಸಲಾಗಿದೆ ಎಂದು ಶಂಕಿಸಲವಾಗಿದೆ. ಆದರೆ, ವಿಸ್ತ್ಡತ ತನಿಖೆಯಿಂದ ಮಾತ್ರ ವಿಚಾರ ಬೆಳಕಿಗೆ ಬರಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT