ಕರ್ನಾಟಕ ಹೈಕೋರ್ಟ್ 
ರಾಜ್ಯ

ಮದುವೆ ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ: ಕರ್ನಾಟಕ ಹೈಕೋರ್ಟ್

ವಿವಾಹವು ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಕಾರ್ಯವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಬೆಂಗಳೂರು: ವಿವಾಹವು ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಕಾರ್ಯವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತಳ್ಳಿಹಾಕಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾಹಿತಿ ಕೇಳುವ ವ್ಯಕ್ತಿ ಪತ್ನಿಯಾಗಿದ್ದರೂ ಆಧಾರ್ ಕಾಯ್ದೆಯ ಸೆಕ್ಷನ್ 33 ರ ಪ್ರಕಾರ ಕಾರ್ಯವಿಧಾನವನ್ನು ಅನುಸರಿಸಬೇಕು ಎಂದು ಹೇಳಿದೆ.

ವೈವಾಹಿಕ ಸಂಬಂಧದ ಆಧಾರದ ಮೇಲೆ ಪತ್ನಿಯು ಪತಿಯ ಆಧಾರ್ ಸಂಖ್ಯೆ ಅಥವಾ ಇನ್ನಾವುದೇ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಧಾರವಾಡ ಹೈಕೋರ್ಟ್ ಪೀಠ ಹೇಳಿದೆ. ಅಲ್ಲದೆ ಕಾನೂನಿನ ಚೌಕಟ್ಟಿನೊಳಗೆ ಸ್ವಾಯತ್ತತೆ ಮತ್ತು ಗೌಪ್ಯತೆ ಹಕ್ಕುಗಳ ರಕ್ಷಣೆಯನ್ನು ಒತ್ತಿಹೇಳಿದೆ.

ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಉಪ ಮಹಾನಿರ್ದೇಶಕರು ಮತ್ತು ಎಫ್‌ಎಎ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಸ್‌ ಸುನಿಲ್‌ ದತ್‌ ಯಾದವ್ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ನೇತೃತ್ವದ ವಿಭಾಗೀಯ ಪೀಠವು ಇತ್ಯರ್ಥಪಡಿಸಿದೆ.

ಸೆಕ್ಷನ್ 33(1) ಪ್ರಕಾರ, ಮಾಹಿತಿಯನ್ನು ಬಹಿರಂಗಪಡಿಸಲು ಆದೇಶ ರವಾನಿಸುವ ಅಧಿಕಾರವನ್ನು ಹೈಕೋರ್ಟ್‌ ನ್ಯಾಯಾಧೀಶರಿಗಿಂತ ಮೇಲ್ಮಟ್ಟದ ನ್ಯಾಯಾಲಯಕ್ಕೆ ನೀಡಲಾಗಿದೆ.

ಆಧಾರ್ ಮಾಹಿತಿ ಕೋರಿದ್ದ ಪತ್ನಿ
ಈ ಪ್ರಕರಣದಲ್ಲಿ ಪತ್ನಿಯು ಪತಿಯ ಆಧಾರ್‌ ಕಾರ್ಡ್‌ನಲ್ಲಿನ ಮಾಹಿತಿ ಕೋರಿದ್ದರು. ಹುಬ್ಬಳ್ಳಿ ಮಹಾನಗರ ನಿವಾಸಿಯಾದ ಮಹಿಳೆಯು 2005ರ ನವೆಂಬರ್‌ನಲ್ಲಿ ವಿವಾಹವಾಗಿದ್ದರು. ದಂಪತಿಗೆ ಹೆಣ್ಣು ಮಗುವಿದೆ. ಪತಿಯ ವಿರುದ್ಧ ವಿಚ್ಛೇದನಕ್ಕೆ ದಾವೆ ಹೂಡಿದ್ದ ಪತ್ನಿಗೆ ಕೌಟುಂಬಿಕ ನ್ಯಾಯಾಲಯವು 10,000 ಜೀವನಾಂಶ ಹಾಗೂ ಹೆಣ್ಣು ಮಗುವಿಗೆ 5,000 ಜೀವನಾಂಶ ನೀಡಲು ಆದೇಶಿಸಿತ್ತು. ಆದರೆ ಪತಿ ಎಲ್ಲಿದ್ದಾನೆ ಎಂಬುದನ್ನು ಪತ್ತೆಯಾಗಿದ್ದರಿಂದ ನ್ಯಾಯಾಲಯದ ಈ ಆದೇಶವನ್ನು ಜಾರಿಗೊಳಿಸಿರಿರಲಿಲ್ಲ. ಹೀಗಾಗಿ ಪತ್ನಿಯು ಆರ್‌ಟಿಐ ಕಾಯಿದೆ ಅಡಿ ಯುಐಡಿಎಐ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT