ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಶಿಕ್ಷಕನ ವಿರುದ್ಧ ಪೋಷಕರ ಪ್ರತಿಭಟನೆ 
ರಾಜ್ಯ

ತುಮಕೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರ ಪ್ರತಿಭಟನೆ

ತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ತುಮಕೂರು: ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಶಿಕ್ಷಕ ಲಕ್ಷ್ಮೀಕಾಂತ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಆರೋಪಿ ಶಿಕ್ಷಕನು ವಿದ್ಯಾರ್ಥಿನಿಯರಿಗೆ ಹಣದ ಆಮಿಷವೊಡ್ಡುತ್ತಿದ್ದನು ಮತ್ತು ತನಗೆ ಅವರ ತಂದೆಯ ಪರಿಚಯವಿದೆ ಎಂದು ಹೇಳುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಪೋಷಕರು ಆರೋಪಿಸಿದ್ದಾರೆ. 

ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಆರೋಪಿ ಶಿಕ್ಷಕನನ್ನು ಕೂಡಲೇ ವರ್ಗಾವಣೆ ಮಾಡಿ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಪೋಷಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT