ತುಮಕೂರು: ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೋಷಕರ ಗುಂಪೊಂದು ಮಂಗಳವಾರ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಶಿಕ್ಷಕ ಲಕ್ಷ್ಮೀಕಾಂತ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಆರೋಪಿ ಶಿಕ್ಷಕನು ವಿದ್ಯಾರ್ಥಿನಿಯರಿಗೆ ಹಣದ ಆಮಿಷವೊಡ್ಡುತ್ತಿದ್ದನು ಮತ್ತು ತನಗೆ ಅವರ ತಂದೆಯ ಪರಿಚಯವಿದೆ ಎಂದು ಹೇಳುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ತಾಯಿಯೊಂದಿಗೆ ಅಂಗಡಿಗೆ ಬಂದಿದ್ದ ಬಾಲಕಿಯೊಂದಿಗೆ ಅನುಚಿತ ವರ್ತನೆ, ಆಭರಣ ವ್ಯಾಪಾರಿಗೆ ಥಳಿತ
ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಆರೋಪಿ ಶಿಕ್ಷಕನನ್ನು ಕೂಡಲೇ ವರ್ಗಾವಣೆ ಮಾಡಿ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಪೋಷಕರು ಆಗ್ರಹಿಸಿದ್ದಾರೆ.