ಸಾಂಕೇತಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ 971 ಅಕ್ರಮ ಭೂ ಮಂಜೂರಾತಿ ರದ್ದುಗೊಳಿಸಿದ ಹಾಸನ ಜಿಲ್ಲಾಡಳಿತ

ಹೇಮಾವತಿ ಪುನರ್ವಸತಿ ಯೋಜನೆಯ ಮೂರು ದಶಕಗಳ ಬಹುಕೋಟಿ ರೂಪಾಯಿ ಭೂ ಹಗರಣ ಕೊನೆಗೂ ತಾರ್ಕಿಕ ಅಂತ್ಯ ಕಾಣುತ್ತಿದೆ. ಯೋಜನೆಯಡಿ ಪುನರ್ವಸತಿ ನೆಪದಲ್ಲಿ ಬೋಗಸ್ ಫಲಾನುಭವಿಗಳಿಗೆ ಹಂಚಲಾಗಿದ್ದ 971 ಅಕ್ರಮ ಭೂ ಮಂಜೂರಾತಿಯನ್ನು ಹಾಸನ ಜಿಲ್ಲಾಡಳಿತ ರದ್ದುಪಡಿಸಿದೆ.

ಹಾಸನ: ಹೇಮಾವತಿ ಪುನರ್ವಸತಿ ಯೋಜನೆಯ ಮೂರು ದಶಕಗಳ ಬಹುಕೋಟಿ ರೂಪಾಯಿ ಭೂ ಹಗರಣ ಕೊನೆಗೂ ತಾರ್ಕಿಕ ಅಂತ್ಯ ಕಾಣುತ್ತಿದೆ. ಯೋಜನೆಯಡಿ ಪುನರ್ವಸತಿ ನೆಪದಲ್ಲಿ ಬೋಗಸ್ ಫಲಾನುಭವಿಗಳಿಗೆ ಹಂಚಲಾಗಿದ್ದ 971 ಅಕ್ರಮ ಭೂ ಮಂಜೂರಾತಿಯನ್ನು ಹಾಸನ ಜಿಲ್ಲಾಡಳಿತ ರದ್ದುಪಡಿಸಿದೆ.

ಅಂದಿನ ಸಹಾಯಕ ಆಯುಕ್ತರಾದ ಕವಿತಾ ರಾಜಾರಾಂ, ಡಾ.ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನೊಳಗೊಂಡ ಸತ್ಯಶೋಧನಾ ಸಮಿತಿಯು ಹಗರಣದ ತನಿಖೆ ನಡೆಸಿ, ಭೂ ಮತ್ತು ದಾಖಲೆಗಳ ನಿರ್ದೇಶಕ ಮೊಹಮ್ಮದ್ ಮೊಹಿಸಿನ್ ಅವರ ನಿರ್ದೇಶನದ ಮೇರೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವ ವರದಿಯನ್ನು ಸಲ್ಲಿಸಿದೆ. 

ವರದಿ ಆಧರಿಸಿ ಅಂದಿನ ಜಿಲ್ಲಾಧಿಕಾರಿ ಗಿರೀಶ್ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವಿವರವಾದ ವರದಿ ಸಲ್ಲಿಸಿದ್ದರು. 2005 ರಿಂದ 2019 ರ ನಡುವೆ ಸೇವೆ ಸಲ್ಲಿಸಿದ ನಾಲ್ವರು ಸಹಾಯಕ ಆಯುಕ್ತರು, 38 ತಹಶೀಲ್ದಾರ್‌ಗಳು, ನಾಲ್ವರು ವಿಶೇಷ ಭೂಸ್ವಾಧೀನ ಅಧಿಕಾರಿಗಳು, 21 ಉಪ ತಹಶೀಲ್ದಾರ್‌ಗಳು, 33 ಕಂದಾಯ ನಿರೀಕ್ಷಕರು ಮತ್ತು 26 ಪ್ರಥಮ ವಿಭಾಗದ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿರುವ 210 ಕಂದಾಯ ನೌಕರರಿಗೆ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. 

ಅಧಿಕಾರಿಗಳು ಬೋಗಸ್ ಜಮೀನು ಮಾಲೀಕರು ಮತ್ತು ಮಧ್ಯವರ್ತಿಗಳಿಗೆ ಸಹಕರಿಸಿದ ನಂತರ ಜಮೀನು ಮಂಜೂರು ಮಾಡಿದ್ದಾರೆ ಎಂದು ಸತ್ಯಶೋಧನಾ ವರದಿಯಲ್ಲಿ ತಿಳಿಸಲಾಗಿದೆ. 2 ಸಾವಿರ ಎಕರೆ ಅರಣ್ಯ ಭೂಮಿ ಸೇರಿದಂತೆ 3 ಸಾವಿರ ಎಕರೆಗೂ ಹೆಚ್ಚು ಒತ್ತುವರಿಯನ್ನು ಕಂದಾಯ ಅಧಿಕಾರಿಗಳು ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ನಕಲಿ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಹರಸಾಹಸವಾಗಿದೆ. 

ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಬಹುಕಾಲದಿಂದ ಬಾಕಿ ಉಳಿದಿರುವ ಈ ಸಮಸ್ಯೆಯನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಹೇಳಿದ್ದಾರೆ.

ಇತ್ತೀಚೆಗೆ ಹಾಸನಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. 

ಚಿಕ್ಕಮಗಳೂರು ಜಿಲ್ಲಾಡಳಿತ ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ಬೋಗಸ್ ದಾಖಲೆ ಆಧರಿಸಿ ಅಕ್ರಮವಾಗಿ ನೀಡಿದ್ದ 6 ಸಾವಿರ ಎಕರೆ ಜಮೀನು ಮಂಜೂರಾತಿ ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT