ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಬಗರ್ ಹುಕುಂ ಯೋಜನೆಯಡಿ ಅಧಿಕ ಬೋಗಸ್ ಅರ್ಜಿಗಳೇ ಸಲ್ಲಿಕೆಯಾಗಿವೆ: ಸಚಿವ ಕೃಷ್ಣ ಬೈರೇಗೌಡ

ಬಗರ್‌ಹುಕುಂ ಯೋಜನೆಯಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ನಕಲಿ ಅರ್ಜಿಗಳನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

ಬೆಂಗಳೂರು: ಬಗರ್‌ಹುಕುಂ ಯೋಜನೆಯಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ನಕಲಿ ಅರ್ಜಿಗಳನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

'ನಾವು ಇಲಾಖೆಯನ್ನು ಸಂಪೂರ್ಣವಾಗಿ ಪೇಪರ್ ಮುಕ್ತಗೊಳಿಸಲು ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುತ್ತಿದ್ದೇವೆ' ಮತ್ತು ಅರ್ಜಿದಾರರು ಭೂಮಿಯನ್ನು ಪಡೆಯಲು ಅರ್ಹರೇ ಎಂದು ತಿಳಿಯಲು ಕಡ್ಡಾಯವಾಗಿ ಅರ್ಜಿಗೆ ಆಧಾರ್ ಲಿಂಕ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅರ್ಜಿ ಸಲ್ಲಿಸಿರುವವರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಅರ್ಹರಲ್ಲ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು 

'2017ರಲ್ಲಿ, ನಾವು ಕಾನೂನನ್ನು ತಿದ್ದುಪಡಿ ಮಾಡಿದ್ದೇವೆ ಮತ್ತು ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಮುಂದಾಗಿದ್ದೇವೆ. ಇದರ ಅಡಿಯಲ್ಲಿ 54 ಲಕ್ಷ ಎಕರೆ ಭೂಮಿಗೆ ಹಕ್ಕುಪತ್ರ ನೀಡುವ 9.29 ಲಕ್ಷ ಅರ್ಜಿಗಳು ರಾಜ್ಯ ಸರ್ಕಾರದ ಮುಂದೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ವಿಲೇವಾರಿ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಅವರು ಹೇಳಿದರು.

'ನಾವು ಅರ್ಜಿದಾರರ ಆಧಾರ್ ವಿವರಗಳನ್ನು ಹೊಂದಿದ್ದೇವೆ. ತಹಶೀಲ್ದಾರರು ಅವರು ಎಷ್ಟು ಜಮೀನು ಹೊಂದಿದ್ದಾರೆ ಮತ್ತು ಈ ಕಾನೂನಿನ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವರು ಅರ್ಹರಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಆ ಭೂಮಿಯಲ್ಲಿ ಸಾಗುವಳಿ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಉಪಗ್ರಹ ಚಿತ್ರಗಳನ್ನೂ ಬಳಸುತ್ತಿದ್ದೇವೆ. ಬಳಿಕ ಇದನ್ನು ಬಗರ್ ಹುಕುಂ ಸಮಿತಿಗೆ ನೀಡಿ ತೀರ್ಮಾನ ಕೈಗೊಳ್ಳುತ್ತೇವೆ' ಎಂದರು.

ಈ ಯೋಜನೆಯು ಸ್ವಂತ ಜಮೀನು ಇಲ್ಲದವರಿಗೆ ಅನ್ವಯಿಸುತ್ತದೆ. 'ಸಾಗುವಳಿ ಮಾಡುತ್ತಿದ್ದರೂ ಅದು 4 ಎಕರೆಗಿಂತ ಹೆಚ್ಚಿರಬಾರದು. ಸರ್ಕಾರಿ ಭೂಮಿಯಲ್ಲಿ ತಿಳಿದೋ ತಿಳಿಯದೆಯೋ ಅನೇಕರು ಸಾಗುವಳಿ ಮಾಡುತ್ತಿದ್ದು, ಇದನ್ನು ಸಕ್ರಮಗೊಳಿಸಬೇಕಾಗಿದೆ. ಅನೇಕ ಅನರ್ಹರು ಸಹ ಅರ್ಜಿ ಸಲ್ಲಿಸಿದ್ದಾರೆ. ಕಾನೂನು ಬಡವರಿಗಾಗಿ ಇರುವುದಾಗಿದೆ. ಆದರೆ, ಅನೇಕರು ಅದನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಎಕರೆಗಟ್ಟಲೆ ಜಮೀನು ಹೊಂದಿರುವ ಶ್ರೀಮಂತರು ಅರ್ಜಿ ಸಲ್ಲಿಸಿದ್ದಾರೆ' ಎಂದು ಗೌಡ ಹೇಳಿದರು.

ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಸರಳೀಕರಿಸಲಾಗುತ್ತಿದ್ದು, ಸಭೆಗಳನ್ನು ಡಿಜಿಟಲೀಕರಣಗೊಳಿಸಲು ಶಾಸಕರ ನೇತೃತ್ವದ ಸಮಿತಿಗಳಿಗೆ ತಿಳಿಸಲಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ ಪ್ರಕರಣಗಳಿವೆ. ಬಗರ್ ಹುಕುಂ ಸಮಿತಿ ರಚನೆ ಕೋರಿ 50 ತಾಲ್ಲೂಕುಗಳಿಂದ ಅರ್ಜಿಗಳು ಬಂದಿದ್ದು, ಮುಂದಿನ ಕೆಲವು ವಾರಗಳಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಂಪೂರ್ಣ ಡಿಜಿಟಲೀಕರಣಕ್ಕಾಗಿ ಪ್ರತಿ ತಹಶೀಲ್ದಾರ್ ಕಚೇರಿಗೆ 50 ಲಕ್ಷ ರೂ. ಅಗತ್ಯವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT