ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ 
ರಾಜ್ಯ

ಐಟಿ ದಾಳಿ ನಂತರ ಅಂಬಿಕಾಪತಿ ಒತ್ತಡ, ಮಾನಸಿಕ ಖಿನ್ನತೆಗೊಳಗಾಗಿದ್ದರು: ಕೆಂಪಣ್ಣ

ಸೋಮವಾರ ಹೃದಯಾಘಾತದಿಂದ ನಿಧನರಾದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ಸಾವಿನ ಸಂಬಂಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಸೋಮವಾರ ಹೃದಯಾಘಾತದಿಂದ ನಿಧನರಾದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ಸಾವಿನ ಸಂಬಂಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕೆಂಪಣ್ಣ, ಅಂಬಿಕಾಪತಿ ಅವರು ತುಂಬಾ ಮನನೊಂದಿದ್ದರು. ಅಂಬಿಕಾ ಪತಿಯ ಸಾವಿಗೆ ಕೆಲವರು ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ. ಅವರ ಸಾವಿಗೆ ಕಾರಣ ಯಾರು ಎಂಬ ಮಾಹಿತಿ ಬಿಚ್ಚಿಡದೆ ಹಾಗೇ ಹೊರಟರು ಎಂದು ಕೆಂಪಣ್ಣ ಹೇಳಿದ್ದಾರೆ. ಅಂಬಿಕಾಪತಿ ತುಂಬಾ ಒಳ್ಳೆಯ ಮನುಷ್ಯ. ಅವರಿಗೆ ಹೀಗಾಗಬಾರದಿತ್ತು ಎಂದು ಕೆಂಪಣ್ಣ ಹೇಳಿದರು.

ಜಾಮೀನಿನ ಮೇಲೆ ಬಿಡುಗಡೆಯಾದ ನಂತರ (ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ) ಅಂಬಿಕಾಪತಿ ಚಾಮರಾಜಪೇಟೆಯಲ್ಲಿರುವ ಸಂಘದ ಕಚೇರಿಗೆ ಬಂದಿದ್ದರು. ಈ ರೀತಿಯ ಆಗುತ್ತದೆಂದು ನಿರೀಕ್ಷಿಸಿರಲಿಲ್ಲ ಎಂದು ಅಳಲು ತೋಡಿಕೊಂಡರು. "ಐಟಿ ದಾಳಿಯ ನಂತರ, ಅವರು ಮತ್ತೆ ನಿರಪರಾಧಿ ಎಂದು ಹೇಳಿಕೊಂಡಿದ್ದರು ಎಂದು ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.

ಅಂಬಿಕಾಪತಿ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಶ್ರೀಲಂಕಾದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು, ಆದರೆ ಸಭೆಗಳಿಗೆ ಹಾಜರಾಗುತ್ತಿದ್ದರು. ಬಂಧನ ಮತ್ತು ಐಟಿ ದಾಳಿಗಳು ನಂತರ ಸಾಕಷ್ಟು ಮಾನಸಿಕ ಒತ್ತಡವನ್ನು ಉಂಟುಮಾಡಿದವು, ಇದರಿಂದಾಗಿ ಅವರು ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT