ಡಿಕೆ ಶಿವಕುಮಾರ್ 
ರಾಜ್ಯ

ಡಿಕೆಶಿಗೆ ಸದ್ಯ ರಿಲೀಫ್: ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಅಸ್ತು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ ಬಿಜೆಪಿ ಸರ್ಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 

ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ್ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು.

ಮೆಮೊ ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯುವುದಕ್ಕೆ ಅನುಮತಿ ನೀಡಿದೆ.

ಯಾರು ಬೇಕಾದರೂ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿಬಹುದು. ಆದರೆ ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್‌ ತಿಳಿಸಿತು.

ಇನ್ನು ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯಾಗಿ ಮಾಡುವಂತೆ ಕೋರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಯನ್ನು ಗಮನಿಸಿದ ಹೈಕೋರ್ಟ್, ಈ ಪ್ರಕರಣದಲ್ಲಿ ನಿಮ್ಮನ್ನು ಪರಿಗಣಿಸುವ ಅಗತ್ಯ ಇಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT