ಡಿ.ಕೆ ಶಿವಕುಮಾರ್ 
ರಾಜ್ಯ

ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ 2 ಸಾವಿರ ಕೋಟಿ ರೂ.ಮೀಸಲು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕಸ ವಿಲೇವಾರಿ, ಸ್ವಚ್ಛತೆ ಮತ್ತು ನೈರ್ಮಲ್ಯ ರಕ್ಷಣೆಗೆ ಸುಮಾರು 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಕಸ ವಿಲೇವಾರಿ, ಸ್ವಚ್ಛತೆ ಮತ್ತು ನೈರ್ಮಲ್ಯ ರಕ್ಷಣೆಗೆ ಸುಮಾರು 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ನಡೆದ 17ನೇ ಅಂತಾರಾಷ್ಟ್ರೀಯ ಮುನ್ಸಿ ಪಾಲಿಕ-23 ಸಮ್ಮೇಳನದ ವಸ್ತುಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ 2 ಸಾವಿರ ಕೋಟಿ ಹಣ ಹಂಚಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಒಟ್ಟಾರೆ ಜನಸಂಖ್ಯೆಯ 7 ಕೋಟಿ ಆದರೆ ಶೇ.40ರಷ್ಟು ಅಂದರೆ 3.25 ಕೋಟಿ ಜನರು ನಗರ ಪ್ರದೇಶಗಳಲ್ಲಿ ವಾಸವಿದ್ದಾರೆ. ಬೆಂಗಳೂರಿನ ಜನಸಂಖ್ಯೆ 1 ಕೋಟಿ 40 ಲಕ್ಷಕ್ಕೆ ಮುಟ್ಟಿದೆ. ಏಕೆ ಜನರು ನಗರ ಪ್ರದೇಶಗಳಿಗೆ ಬರುತ್ತಿದ್ದಾರೆ ಎನ್ನುವ ಕುರಿತು ನಾವೆಲ್ಲಾ ಯೋಚನೆ ಮಾಡಬೇಕಿದೆ ಎಂದರು.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಕಟ್ಟು ನಿಟ್ಟಿನ ಆದೇಶ ನೀಡಿದ್ದು, ನಗರದ ಸ್ವಚ್ಚತೆ, ನೈರ್ಮಲ್ಯದ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಕರ್ನಾಟಕಕ್ಕೆ ಬೆಂಗಳೂರು ಹೃದಯ. ಪ್ರತಿ ಜಿಲ್ಲೆಯ, ತಾಲೂಕಿನ ನಗರಗಳು ಹೃದಯಗಳಂತೆ ತಿಳಿದು ಅವುಗಳನ್ನು ಕಾಪಾಡಬೇಕು ಎಂದು ಸೂಚನೆ ನೀಡಿದರು.

ಕೆಲವರು ಒಂದು ಅಂತಸ್ತಿನ ಕಟ್ಟಡವನ್ನು ನಿರ್ಮಿಸಲು ಅನುಮತಿ ಪಡೆದಿದ್ದಾರೆ, ಆದರೆ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸುತ್ತಾರೆ. ಅಂತಹ ಕಟ್ಟಡಗಳನ್ನು ಅಧಿಕಾರಿಗಳು ಗುರುತಿಸಬೇಕು. ಅವರು ರಾಜಕೀಯ ಒತ್ತಡಗಳಿಗೆ ಮಣಿಯಬಾರದು ಮತ್ತು ಆಸ್ತಿ ಮೌಲ್ಯಗಳನ್ನು ಸರಿಯಾಗಿ ಗುರುತಿಸಬೇಕು ಮತ್ತು ತೆರಿಗೆಗಳನ್ನು ಸಂಗ್ರಹಿಸಬೇಕು ಎಂದು ಶಿವಕುಮಾರ್ ಕರೆ ನೀಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗ ಶೇ.38 ರಷ್ಟು ಜನರು ನಗರಸಭೆ ಮತ್ತು ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಸರ್ಕಾರ ನೀರು ಸರಬರಾಜು, ಒಳಚರಂಡಿ ಜಾಲ, ವಿದ್ಯುತ್ ಮತ್ತು ಸಾರಿಗೆಯನ್ನು ಒದಗಿಸಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT