ಸಿದ್ದರಾಮಯ್ಯ 
ರಾಜ್ಯ

ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ ಆರಂಭ: ಸಿಎಂ ಸಿದ್ದರಾಮಯ್ಯ

ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಶಾಸಕರ ಭವನದ ಆವರಣದಲ್ಲಿ ಸಂತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ವೇಳೆ ಇಂದಿರಾ ಕ್ಯಾಂಟೀನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

ರಾಜ್ಯದ ಜನತೆಗೆ ಕನಕದಾಸ ಜಯಂತಿಯ ಶುಭಾಶಯ ಕೋರಿದ ಸಿಎಂ, ''ಕನಕದಾಸರು ಸಮಾಜ ಸುಧಾರಕರಾಗಿದ್ದರು. ಸಾಹಿತ್ಯದ ಮೂಲಕ ಮಾನವೀಯತೆ ಸಾರಿದ್ದರು. ತಾರತಮ್ಯವಿಲ್ಲದೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ವಿಶ್ವಮಾನವನ ಜಯಂತಿಯನ್ನು ಇಂದು ಸರ್ಕಾರ ಆಚರಿಸುತ್ತಿದೆ' ಎಂದು ಹೇಳಿದರು.

ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿ.ಆರ್. ಪಾಟೀಲ್ ಅವರಿಗೆ ಅಧಿವೇಶನಕ್ಕೆ ಹಾಜರಾಗುವಂತೆ ಮನವೊಲಿಸಲಾಗಿದೆ ಎಂದು ತಿಳಿಸಿದರು.

ಬಳಿಕ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ನಾಡಿಗೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT