ಕರ್ನಾಟಕ ಲೋಕಾಯುಕ್ತ 
ರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ

ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

ಆದರೆ ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಇದೀಗ ಅಂತಿಮವಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನು ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್​ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT