ಕರ್ನಾಟಕ ಲೋಕಾಯುಕ್ತ 
ರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ

ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

ಆದರೆ ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಇದೀಗ ಅಂತಿಮವಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನು ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್​ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT