ಸಾಂದರ್ಭಿಕ ಚಿತ್ರ 
ರಾಜ್ಯ

ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ: ನಕಲಿ ವೈದ್ಯ ಸೇರಿ ಇಬ್ಬರ ಬಂಧನ

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಕಲಿ ವೈದ್ಯ ಹಾಗೂ ಮಹಿಳಾ ಏಜೆಂಟ್'ಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಕಲಿ ವೈದ್ಯ ಹಾಗೂ ಮಹಿಳಾ ಏಜೆಂಟ್'ಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರಾಜಾಜಿನಗರದ ಕಿರಣ್ ಅಲಿಯಾಸ್ ಕೆವಿನ್ ಹಾಗೂ ನಂದಿನ ಲೇಔಟ್'ನ ಜೈ ಭುವನೇಶ್ವರಿ ನಗರದ ರಮ್ಯಾ ಬಂಧಿತರಾಗಿದ್ದು, ಆರೋಪಿಗಳಿಂದ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ನವಜಾತ ಶಿಶು ಮಾರಾಟ ಪ್ರಕರಣದರಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿಚಾರಣೆ ವೇಳೆ ಲಭ್ಯವಾದ ಮಾಹಿತಿ ಆಧರಿಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಈ ಪೈಕಿ 8 ಮಂದಿ ಮಹಿಳೆಯರಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ಮದುವೆಯಿಲ್ಲದೆ ಗರ್ಭಿಣಿಯಾಗಿದ್ದ ತನ್ನ ಸಂಬಂಧಿಯೊಬ್ಬಳು ಗರ್ಭಪಾತಕ್ಕೆ ಮುಂದಾಗಿದ್ದಾಗ ಬಂಧಿತ ಆರೋಪಿ ರಮ್ಯಾ ಆಕೆಗೆ ಹಣದ ಆಮಿಷ ಒಡ್ಡಿ, ಮಗುವಿಗೆ ಜನ್ಮ ನೀಡುವಂತೆ ಮಾಡಿದ್ದಳು. ಮಗುವಿಗೆ ಜನ್ಮ ನೀಡಿದ ನಂತರ ಆರೋಪಿ ರಮ್ಯಾ ಇತರೆ ಎಂಟು ಆರೋಪಿಗಳ ಸಹಾಯದಿಂದ ಮಗುವನ್ನು ಮಾರಾಟ ಮಾಡಿದ್ದಳು. ಮಗುವನ್ನು ಮಾರಾಟ ಮಾಡಲು ತನ್ನ ಸಂಬಂಧಿಕ ಮಹಿಳೆಗೆ ಕೆಲವು ಲಕ್ಷಗಳನ್ನು ನೀಡಿದ್ದಳು. ಅಲ್ಲದೆ, ಆಕೆಯ ಮದುವೆಗೂ ಸಹಾಯ ಮಾಡಿದ್ದಳು. ಇದೀಗ ಸಿಸಿಬಿ ಅಧಿಕಾರಿಗಳು ರಮ್ಯಾ ಮಗುವನ್ನು ಮಾರಾಟ ಮಾಡಿದ್ದ ಮಹಿಳೆ ಪತ್ತೆಗೆ ಮುಂದಾಗಿದ್ದಾರೆ.

ಇನ್ನು ಮತ್ತೊಬ್ಬ ಆರೋಪಿ ಕೆವಿನ್ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಬಿಟ್ಟಿದ್ದ. ಬಳಿಕ ವೈದ್ಯರೊಬ್ಬರ ಬಳಿ ಸಹಾಯಕನಾಗಿ ಕೆವಿನ್ ಕೆಲಸ ಮಾಡುತ್ತಿದ್ದ. ಆನಂತರ ತಾನೇ ರಾಜಾಜಿನಗರದ 6ನೇ ಬ್ಲಾಕ್ ನಲ್ಲಿ ವೈದ್ಯ ಎಂದು ಹೇಳಿಕೊಂಡು ಕ್ಲಿನಿಕ್ ಶುರು ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT